ಜು.13ರಂದು ವಿನೋಬನಗರ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಪ್ರಾಥಮಿಕ – ಪ್ರೌಢ ಹಾಗೂ ಪದವಿಪೂರ್ವ ವಿಭಾಗದ ಶೈಕ್ಷಣಿಕ ಸಮಾವೇಶ

0

ವಿದ್ಯಾಭಾರತಿ ಕರ್ನಾಟಕ, ದ.ಕ. ಜಿಲ್ಲೆಯ , ಪುತ್ತೂರು ವಿಭಾಗದ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ವಿಭಾಗದ ಶೈಕ್ಷಣಿಕ ಸಮಾವೇಶವು ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಜು.13ರಂದು ನಡೆಯಲಿದೆ.

ಈ ಶೈಕ್ಷಣಿಕ ಸಮಾವೇಶದಲ್ಲಿ ಬೇರೆ ಬೇರೆ ವಿದ್ಯಾಸಂಸ್ಥೆಗಳಿಂದ ಸುಮಾರು 750 ಶಿಕ್ಷಕರು, ಆಡಳಿತ ಮಂಡಳಿಯವರು ಮತ್ತು ಬೋಧಕೆತರ ವೃಂದದವರು ಭಾಗವಹಿಸಲಿದ್ದಾರೆ.