ಪಡ್ಪಿನಂಗಡಿ: ಲಯನ್ಸ್ ಮೂರು ಪ್ರಾಂತೀಯ ಪಿ.ಎಸ್.ಟಿ ಗಳಿಗೆ ತರಬೇತಿ ಕಾರ್ಯಾಗಾರ

0

ಲಯನ್ಸ್ ಕ್ಲಬ್ ಆಶ್ರಯದಲ್ಲಿ ಸುಳ್ಯ, ಪುತ್ತೂರು, ಮಡಿಕೇರಿ ಪ್ರಾಂತೀಯ ಪಿ.ಎಸ್.ಟಿ ಗಳಿಗೆ ತರಬೇತಿ ಕಾರ್ಯಾಗಾರ ಜು.14 ರಂದು ಪಡ್ಪಿನಂಗಡಿ ನಡ್ಕ ಶಿವ ಗೌರಿ ಕಲಾಮಂದಿರದಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯಪಾಲೆ ಬಿ.ಎಂ ಭಾರತಿ ದೀಪ ಬೆಳಗಿಸಿ ಉದ್ಘಾಟಿಸಿದರು. ನಿಕಟಪೂರ್ವ ರಾಜ್ಯಪಾಲ ಮೆಲ್ವಿನ್ ಡಿಸೋಜ,ಪ್ರಥಮ ಉಪರಾಜ್ಯಪಾಲ ಕುಡ್ಪಿ ಅರವಿಂದ ಶೆಣೈ ,ಜಿಲ್ಲಾ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ರಮ್ಯಾ ದಿಲೀಪ್ ಬಾಬ್ಲುಬೆಟ್ಟು ಪ್ರಾರ್ಥಿಸಿದರು. ಜಿ.ಎಲ್.ಟಿ ಕ್ಯಾಬಿನೆಟ್ ಅನೀಲ್ ಕುಮಾರ್ ಸ್ವಾಗತಿಸಿ, ನಿರೂಪಿಸಿದರು. ಕಾರ್ಯಕ್ರಮವನ್ನು ಆಯೋಜಿಸಿದ ಪಂಜ ಲಯನ್ಸ್ ಕ್ಲಬ್‌ನ ಅಧ್ಯಕ್ಷ ಶಶಿಧರ ಪಳಂಗಾಯ, ಕಾರ್ಯದರ್ಶಿ ಮೋಹನ್ ದಾಸ್ ಕೂಟಾಜೆ, ಸುರೇಶ್ ಕುಮಾರ್ ನಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.