ಪಂಜ :ದೈಹಿಕ ಶಿಕ್ಷಣ ಶಿಕ್ಷಕ ಯೋಗೀಶ್ ಚಿದ್ಗಲ್ಲು ಜು.31 ರಂದು ನಿವೃತ್ತಿ :ಸನ್ಮಾನ ಸಮಿತಿ ರಚನೆ

0

ಪಂಜ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಪಂಜ ಇಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸುಧೀರ್ಘ ಸೇವೆ ಸಲ್ಲಿಸಿ ಜು. 31ರಂದು ನಿವೃತ್ತಿಯಾಗಲಿರುವ ಯೋಗೀಶ್ ಸಿ ರವರಿಗೆ ವಿದಾಯ ಸಮಾರಂಭವನ್ನು ಏರ್ಪಡಿಸುವ ಸಲುವಾಗಿ ಸನ್ಮಾನ ಸಮಿತಿಯನ್ನು ರಚಿಸಲಾಯಿತು.

ಸಮಿತಿಯ ಅಧ್ಯಕ್ಷರಾಗಿ ಮಾಧವ ಬಿ ಕೆ ಉಪಾಧ್ಯಕ್ಷರಾಗಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸವಿತಾರ ಮುಡೂರು,
ಪ್ರಾಂಶುಪಾಲ ವೆಂಕಪ್ಪ ಗೌಡ ಕೇನಾಜೆ , ಕ್ರೀಡಾಭಿವೃದ್ದಿ ಸಮಿತಿ ಅಧ್ಯಕ್ಷ
ಸುಚಿನ್ನ ಕಾಣಿಕೆ , ಕಾರ್ಯದರ್ಶಿಯಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜು ಮುಖ್ಯ ಶಿಕ್ಷಕ ಪುರಂದರ ,
ಜತೆ ಕಾರ್ಯದರ್ಶಿಯಾಗಿ ಸಂದೀಪ್ ಪಲ್ಲೋಡಿ, ಖಜಾಂಚಿಯಾಗಿ ಉಮೇಶ್ ಪಂಜದ ಬೈಲು ಹಾಗೂ ಸದಸ್ಯರಾಗಿ ಸ್ಥಳೀಯ ಸಂಘ ಸಂಸ್ಥೆಗಳ ಅಧ್ಯಕ್ಷರುಗಳನ್ನೊಳಗೊಂಡ ಸಮಿತಿಯನ್ನು ರಚಿಸಲಾಯಿತು.
ಆ.3 ರಂದು ಸಮಾರಂಭ ನಡೆಸುವುದಾಗಿ ತೀರ್ಮಾನಿಸಲಾಯಿತು.