ಪಂಜ ದೇಗುಲದ ವಠಾರದಲ್ಲಿ ವನಮಹೋತ್ಸವ ಕಾರ್ಯಕ್ರಮ

0

ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಪಂಜ, ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಪಂಜ ವಲಯ, ಅರಣ್ಯ ಇಲಾಖೆ ಪಂಜ ಇವುಗಳ ಸಂಯುಕ್ತ ಆಶ್ರಯದಲ್ಲಿ ವನಮಹೋತ್ಸವ ಕಾರ್ಯಕ್ರಮ ಜು.14 ರಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು.

ಮುಖ್ಯ ಅತಿಥಿ ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ರೈ ಗಿಡ ನೆಡುವ ಮೂಲಕ ಉದ್ಘಾಟಿಸಿದರು.

ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಸೇವಾ ದೀಕ್ಷಿತೆ ಶ್ರೀಮತಿ ಸವಿತಾ ನಾಗತೀರ್ಥ, ಸಂಘಟನಾ ಕಾರ್ಯದರ್ಶಿ ಪುರುಷೋತ್ತಮ ಆಚಾರ್ಯ ನಾಗತೀರ್ಥ ಹಾಗೂ ಸದಸ್ಯರು,ಗ್ರಾಮ ಪಂಚಾಯತ್ ಸದಸ್ಯ ಶರತ್ ಕುದ್ವ, ಗಸ್ತು ಅರಣ್ಯಪಾಲಕ ಆಕಾಶ್ , ಅರಣ್ಯ ವೀಕ್ಷಕ ಗಣೇಶ್ ಹೆಗ್ಡೆ, ಪಂಜ ಲಯನ್ಸ್ ಕ್ಲಬ್ ಉಪಾಧ್ಯಕ್ಷ ಕೇಶವ ಕುದ್ವ, ತೀರ್ಥಪ್ರಸಾದ್ ಪಲ್ಲತ್ತಡ್ಕ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಮಾಯಿಲಪ್ಪ ಗೌಡ ಪಟ್ಟೆ ಎಣ್ಮೂರು , ಸಂತೋಷ್ ರೈ ಪಲ್ಲತ್ತಡ್ಕ, ಧರ್ಮಪಾಲ ಗೌಡ ಮರಕಡ,ಧರ್ಮಣ್ಣ ನಾಯ್ಕ ಗರಡಿ, ರಾಮಚಂದ್ರ ಭಟ್, ಸತ್ಯನಾರಾಯಣ ಭಟ್ ಕಾಯಂಬಾಡಿ,ಶ್ರೀಮತಿ ಮಾಲಿನಿ ಕುದ್ವ, ಶ್ರೀಮತಿ ಪವಿತ್ರ ಮಲ್ಲೆಟಿ ಮೊದಲಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಡಾ.ದೇವಿಪ್ರಸಾದ್ ಕಾನತ್ತೂರ್ ಸ್ವಾಗತಿಸಿದರು ಮತ್ತು ವಂದಿಸಿದರು.