ಸೋಣಂಗೇರಿ: ಕಾಲುಜಾರಿ ತೋಟದ ಕೆರೆಗೆ ಬಿದ್ದು ವೃದ್ಧೆ ಮ್ಯತ್ಯು

0

ತೋಟದ ಕೆರೆಗೆ ಕಾಲು ಜಾರಿ ಬಿದ್ದು ವಯೋವೃದ್ಧೆಯೋರ್ವರು ಮೃತಪಟ್ಟ ಘಟನೆ ಜಾಲ್ಸೂರು ಗ್ರಾಮದ ಸೋಣಂಗೇರಿಯಲ್ಲಿ ಜು.15ರಂದು ಬೆಳಿಗ್ಗೆ ಸಂಭವಿಸಿದೆ.

ಸೋಣಂಗೇರಿ ದಿ. ಮಂಜಪ್ಪ ಶೆಟ್ಟಿ ಅವರ ಧರ್ಮಪತ್ನಿ ಶ್ರೀಮತಿ ಮಾನಕ್ಕ ಅವರು ಬೆಳಿಗ್ಗೆ ತಮ್ಮ ತೋಟದಲ್ಲಿ ನಡೆದಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಲುಜಾರಿ ಪಕ್ಕದ ಕೆರೆಗೆ ಬಿದ್ದು, ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಅವರಿಗೆ 82 ವರ್ಷ ವಯಸ್ಸಾಗಿತ್ತು.
ಮೃತರು ಇಬ್ಬರು ಪುತ್ರಿಯರಾದ ಜಯಶ್ರೀ, ಮಂಜುಳ ಸೇರಿದಂತೆ ಕುಟುಂಬಸ್ಥರನ್ನು ಅಗಲಿದ್ದಾರೆ.