ಸುಬ್ರಹ್ಮಣ್ಯದ ಎಸ್‌ಎಸ್‌ಪಿಯು ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಮಹಾಸಭೆ

0

ಸುಬ್ರಹ್ಮಣ್ಯದ ಎಸ್.ಎಸ್.ಪಿ.ಯು ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಮಹಾಸಭೆ ಜು.13 ರಂದು ನಡೆಯಿತು.

ಸಮಾರಂಭದ ಮುಖ್ಯ ಅತಿಥಿಯಾಗಿ ಕಾಲೇಜಿನ ಪ್ರಾಂಶುಪಾಲ ಸೋಮಶೇಖರ ನಾಯಕ್ ಅತಿಥಿಯಾಗಿದ್ದರು. ಸಮಾರಂಭದಲ್ಲಿ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಕ್ಕೆ 5ನೇ ಸ್ಥಾನ ಪಡೆದ ದುರ್ಗಾಲಕ್ಷ್ಮೀ ಜಿ.ಸಿ, ತರಗತಿಗೆ ಅತ್ಯಧಿಕ ಅಂಕ ಗಳಿಸಿದ ರಾಧಿಕಾ ಯು.ಆರ್, ಹೇಮಶ್ರೀ, ಹೃತೇಶ್ ಪದ್ಮನಾಭ, ಸಾರಿಕಾ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ರಾಜೇಶ್ ಮಾವಿನಕಟ್ಟೆ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಹಿರಿಯ ಉಪನ್ಯಾಸಕಿ ಮತ್ತು ಶಿಕ್ಷಕ ರಕ್ಷಕ ಸಂಘದ ಉಪನ್ಯಾಸಕ ಪ್ರತಿನಿಧಿ ರೇಖಾರಾಣಿ ಸೋಮಶೇಖರ್, ಸಂಘದ ಜತೆ ಕಾರ್ಯದರ್ಶಿ ಶಶಿಧರ್ ಕತ್ತಿಮಜಲು, ಸಂಘದ ಸದಸ್ಯರಾದ ನಳಿನಿ.ಪಿ, ಪದ್ಮನಾಭ ದೇರಣೆ, ಹರೀಶ್ ಗೌಡ, ವೆಂಕಟೇಶ್ ಎಚ್.ಎಲ್, ತೀರ್ಥರಾಮ ಕಜೆಗದ್ದೆ ವೇದಿಕೆಯಲ್ಲಿದ್ದರು.
ಹಿರಿಯ ಆಯ್ಕೆ ಶ್ರೇಣಿ ಉಪನ್ಯಾಸಕಿ ರೇಖಾರಾಣಿ ಸೋಮಶೇಖರ್ ಸ್ವಾಗತಿಸಿದರು. ಉಪನ್ಯಾಸಕಿ ಪೂರ್ಣಿಮಾ ವಂದಿಸಿದರು. ಉಪನ್ಯಾಸಕಿ ಶ್ರುತಿ ಯಾಲದಾಳು ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕರು, ಬೋಧಕೇತರರು, ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳು, ಎನ್‌ಎಸ್‌ಎಸ್ ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.