ಮೊಗರ್ಪಣೆ ಜುಮ್ಮಾ ಮಸೀದಿಯಲ್ಲಿ ಕೂರತ್ ತಂಙಳ್ ರವರ ಅನುಸ್ಮರಣೆ ಹಾಗೂ ದುವಾ ಮಜ್ಲಿಸ್

0

ಮೊಗರ್ಪಣೆ ಮುಹಿಯ್ಯದ್ದೀನ್ ಜುಮ್ಮಾ ಮಸೀದಿಯಲ್ಲಿ ಇತ್ತೀಚೆಗೆ ನಿಧನರಾದ ದ ಕ ಜಿಲ್ಲಾ ಸಂಯುಕ್ತ ಖಾಝಿ ಹಾಗೂ ಮೊಗರ್ಪಣೆ ಮಸೀದಿಯ ಖಾಝಿ ಅಸ್ಸಯ್ಯದ್ ಫಝಲ್ ಕೋಯಮ್ಮ ತಂಙಳ್ ಕೂರತ್ ರವರ ಅನುಸ್ಮರಣೆ ಹಾಗೂ ದುವಾ: ಮಜ್ಲಿಸ್ ಜು.14 ರಂದು ನಡೆಯಿತು.

ಕಾರ್ಯಕ್ರಮದ ಅಂಗವಾಗಿ ಮೌಲೂದ್ ಪಠಣ ಮತ್ತು ತಹಲೀಲ್ ಸಮರ್ಪಣೆ ನಡೆಯಿತು.
ಸ್ಥಳೀಯ ಮುದರ್ರಿಸ್ ಹಾಫಿಲ್ ಸೌಕತ್ ಅಲಿ ಸಖಾಫಿಯವರು ನೇತೃತ್ವ ವಹಿಸಿ ಸಾಮೂಹಿಕ ಪ್ರಾರ್ಥನೆ ನಡೆಸಿದರು. ಬಳಿಕ ತಂಗಳ್ ರವರು ಅನುಸರಿಸಿದ ಆದರ್ಶ ಮಾರ್ಗದ ಕುರಿತು ಅನುಸ್ಮರಣಾ ಭಾಷಣ ಮಾಡಿದರು.


ಈ ಸಂಧರ್ಭದಲ್ಲಿ ಎಚ್ ಐ ಜೆ ಕಮಿಟಿ ಅಧ್ಯಕ್ಷ ಹಾಜಿ ಇಬ್ರಾಹಿಂ ಸೀ ಫುಡ್, ಕಾರ್ಯದರ್ಶಿ ಎಸ್ ಯು ಇಬ್ರಾಹಿಂ,ಉಪಾಧ್ಯಕ್ಷ ಸಿ ಎಂ ಉಸ್ಮಾನ್, ಕೋಶಾಧಿಕಾರಿ ಮಹಮ್ಮದ್ ಆದರ್ಶ,ಜೊತೆ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಎಸ್ ವೈ ಹಾಗೂ ಸಮಿತಿ ಸದಸ್ಯರುಗಳು, ನೂರುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದರಸದ ಸದರ್ ಮುಅಲ್ಲಿಮ್ ಅಬ್ದುಲ್ ಕರೀಮ್ ಸಖಾಫಿ,ಮದರಸ ಮುಅಲ್ಲಿಮರುಗಳು,ಸ್ಥಳೀಯ ಜಮಾಅತ್ ಸದಸ್ಯರು ಭಾಗವಹಿಸಿದ್ದರು.


ಕಾರ್ಯಕ್ರಮದ ಕೊನೆಯಲ್ಲಿ ಅನ್ನದಾನ ನಡೆಯಿತು.
ಸ್ಥಳೀಯ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು, ಯುವಕರು ಸಹಕರಿಸಿದರು.