ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪ್ರಾಧಿಕಾರ ರಚನೆ ಪ್ರಸ್ತಾಪಕ್ಕೆ ಅಪಸ್ವರ

0

ವ್ಯವಸ್ಥಾಪನಾ ಸಮಿತಿ ನೇಮಕದ ಸುಳಿವು

ಭರವಸೆಯೊಂದಿಗೆ ಹಿಂತಿರುಗಿದ ಕಾಂಗ್ರೆಸ್ ನಿಯೋಗ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪ್ರಾಧಿಕಾರ ರಚನೆ ಪ್ರಸ್ತಾಪ ಸದ್ಯ ಕೈ ಬಿಟ್ಟು ವ್ಯವಸ್ಥಾಪನಾ ಸಮಿತಿ ನೇಮಕ ಆಗುವ ಸುಳಿವು ದೊರೆತಿರುವುದಾಗಿ ತಿಳಿದು ಬಂದಿದೆ.

ಕಾಂಗ್ರೆಸ್ ಮುಖಂಡರ ನಿಯೋಗವೊಂದು ಬೆಂಗಳೂರಿಗೆ ತೆರಳಿ ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಅಭಿವೃದ್ದಿ ಪ್ರಾಧಿಕಾರ ಆದರೇ ಆಗುವ ಸಮಸ್ಯೆಗಳ ಬಗ್ಗೆ ಕರ್ನಾಟಕ ಸರಕಾರದ ಸಂಬಂಧ ಪಟ್ಟ ಇಲಾಖೆ, ಮಂತ್ರಿಗಳಿಗೆ ಮನವಿ ಸಲ್ಲಿಸಿದೆ.

ಬೆಂಗಳೂರಿಗೆ ತೆರಳಿದ ಕಾಂಗ್ರೆಸ್ ಮುಖಂಡರ ನಿಯೋಗ. ಮುಜುರಾಯಿ ಸಚಿವ ರಾಮಲಿಂಗಾರೆಡ್ಡಿ, ಸಭಾಪತಿ ಯು.ಟಿ ಖಾದರ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಭೇಟಿಮಾಡಿ ಮನವಿ ಸಲ್ಲಿಸಿ ತಮ್ಮ ಅಹವಾಲು ಸಲ್ಲಿಸಿದ್ದಾರೆ. ಸದ್ಯ ಪ್ರಾಧಿಕಾರ ರಚನೆ ವಿಚಾರ ಕೈ ಬಿಡುವ ಭರವಸೆ ದೊರೆತಿರುವುದಾಗಿ ತಿಳಿದು ಬಂದಿದೆ.