ಕುಕ್ಕುಜಡ್ಕ: ಆಟೋರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆ

0

ಅಮರಮುಡ್ನೂರಿನ ಕುಕ್ಕುಜಡ್ಕದ ಅಟೋ ಚಾಲಕ ಮಾಲಕರ ಸಂಘ (ಬಿಎಂಸ್ )ದ ವಾರ್ಷಿಕ ಮಹಸಭೆಯು ಜು. 17 ರಂದು ಕುಕ್ಕುಜಡ್ಕದಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ಸತೀಶ್ ಪಿಲಿಕಜೆ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ತಾಲೂಕು ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷ ರಾಧಾಕೃಷ್ಣ ಬೈತಡ್ಕ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಮರ್ಕಂಜ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಮುಂದಿನ ಸಾಲಿನ ನೂತನಪದಾಧಿಕಾರಿಗಳನ್ನುಆಯ್ಕೆಮಾಡಲಾಯಿತು. ಅಧ್ಯಕ್ಷರಾಗಿ ಸತೀಶ್ ಪಿಲಿಕಜೆ ಯವರನ್ನು ಪುನರಾಯ್ಕೆ ಮಾಡಲಾಯಿತು.


ಕಾರ್ಯದರ್ಶಿ ಪುನೀತ್ ಸಂಕೇಸ ಸಂಘಟನಾ ಕಾರ್ಯದರ್ಶಿ ವಿನಯ ಪಾಡಾಜೆ, ನಿರ್ದೇಶಕರಾಗಿ ಹರೀಶ್ ಕೊರತ್ಯಡ್ಕ ರವರನ್ನು ಆಯ್ಕೆ ಮಾಡಲಾಯಿತು.


ಕು.ಪ್ರಣಮ್ಯ ಕುಕ್ಕುಜಡ್ಕ ಪ್ರಾರ್ಥಿಸಿದರು. ಕಾರ್ಯದರ್ಶಿ ಪುನೀತ್ ಸಂಕೇಸ ವರದಿ ವಾಚಿಸಿ, ಕಾರ್ಯಕ್ರಮ ನಿರೂಪಿಸಿದರು.
.