ಶಿಕ್ಷಕ ರಾಮಕೃಷ್ಣ ಭಟ್ ಚೊಕ್ಕಾಡಿ -60 ಅಭಿನಂದನಾ ಸಮಾರಂಭ, ಪೂರ್ವಭಾವಿ ಸಭೆ

0

ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಮಂಗಳೂರು, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಸುಳ್ಯ ತಾಲೂಕು ಘಟಕ ಮತ್ತು ಜೇಸಿಐ ಬೆಳ್ಳಾರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಬೆಳಾಲು ಶ್ರೀ ಮಂಜುನಾಥೇಶ್ವರ ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೊಕ್ಕಾಡಿ – 60 ಅಭಿನಂದನಾ ಸಮಾರಂಭ ಮತ್ತು ‘ಅಕ್ಷರ ತೇರಿನ ಸಾರಥಿ’ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮ ಆ. 4ರಂದು ಚೊಕ್ಕಾಡಿಯ ಶ್ರೀರಾಮ ದೇವಾಲಯದ ದೇಸೀ ಭವನದಲ್ಲಿ ಜರಗಲಿದ್ದು, ಈ ಬಗ್ಗೆ ಪ್ರಥಮ ಪೂರ್ವಭಾವಿ ಸಭೆ ಜು. 17ರಂದು ಚೊಕ್ಕಾಡಿಯ ಶ್ರೀರಾಮ ದೇವಾಲಯದಲ್ಲಿ ನಡೆಯಿತು.
ರಾಮಕೃಷ್ಣ ಭಟ್ ಚೊಕ್ಕಾಡಿ – 60 ಅಭಿನಂದನಾ ಸಮಿತಿ ಅಧ್ಯಕ್ಷ ಆನೆಕಾರ ಗಣಪಯ್ಯ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಮಿತಿಯ ಸಂಚಾಲಕ ಮಹೇಶ್ ಭಟ್ ಚೂಂತಾರು ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಾರ್ಯದರ್ಶಿ ಪ್ರದೀಪ್ ಕುಮಾರ್ ರೈ ಪನ್ನೆ ವಂದಿಸಿದರು. ಜೇಸಿಐ ಬೆಳ್ಳಾರೆ ಇದರ ಅಧ್ಯಕ್ಷ ಜಗದೀಶ್ ರೈ ಪೆರುವಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸದಸ್ಯರಾದ ಸತ್ಯವೆಂಕಟೇಶ ಹೆಬ್ಬಾರ್, ಆರ್.ಕೆ. ಬೆಳ್ಳಾರೆ, ಕೃಷ್ಣಮೂರ್ತಿ ನೇಣಾರು, ತೇಜಸ್ವಿ ಕಡಪಳ, ಸಂಕೀರ್ಣ ಅಜ್ಜನಗದ್ದೆ, ಈಶ್ವರ ವಾರಣಾಶಿ, ಜೇಸಿಐ ಬೆಳ್ಳಾರೆ ಮಾಜಿ ಅಧ್ಯಕ್ಷ ಪ್ರೀತಮ್ ರೈ ಸಭೆಯಲ್ಲಿ ಉಪಸ್ಥಿತರಿದ್ದರು.