ರಾಜ್ಯ ವಿಶೇಷಚೇತನ ಕಾರ್ಯಕರ್ತರ ನಗರ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಕನಿಷ್ಠ ವೇತನ ಜಾರಿಗೊಳಿಸುವಂತೆ ವಿಧಾನಸಭಾ ಅಧ್ಯಕ್ಷರಿಗೆ ಮನವಿ

0

ರಾಜ್ಯ ವಿಶೇಷಚೇತನ ಕಾರ್ಯಕರ್ತರ ನಗರ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಕನಿಷ್ಠ ವೇತನ ಜಾರಿಗೊಳಿಸುವಂತೆ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಅವರಿಗೆ
ವಿಶೇಷಚೇತನ ಕಾರ್ಯಕರ್ತರ ನಗರ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಒಕ್ಕೂಟದ ರಾಜ್ಯ ಸಮಿತಿ ಸಂಸ್ಥಾಪಕ ಅಧ್ಯಕ್ಷ ಪ್ರವೀಣ್ ನಾಯಕ್ ಸುಳ್ಯ ಇತ್ತೀಚೆಗೆ ವಿಧಾನಸೌಧದ ಸ್ಪೀಕರ್ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಸ್ಪೀಕರ್ ಯು.ಟಿ ಖಾದರ್ ಅವರನ್ನು ವಿಧಾನಸೌಧ ಕಚೇರಿಯಲ್ಲಿ ಮನವಿ ಸಲ್ಲಿಸಿದ ಅವರು ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಲ್ಲಿ ಚರ್ಚಿಸಿ ಕನಿಷ್ಠ ವೇತನ ಜಾರಿಗೊಳಿಸಲು ಮತ್ತು ವಿಕಲಚೇತನರ ರಾಜ್ಯ ಸಮಿತಿ ಯವರ ಜೊತೆ ಸಿಎಂ, ಸಂಬಂಧ ಪಟ್ಟ ಸಚಿವರೊಂದಿಗೆ ಸ್ಪೀಕರ್ ಉಪಸ್ಥಿಯಲ್ಲಿ ಸಭೆ ನಡೆಸುವಂತೆ ಮನವಿ ಮಾಡಿದ್ದಾರೆ.

ಅಲ್ಲದೆ ಇಲಾಖೆಯ ನಿರ್ದೇಶಕರಲ್ಲಿಯೂ ಮಾತುಕತೆ ನಡೆಸಿ ಕಾರ್ಯಕರ್ತರ ಕೆಲವು ಸಮಸ್ಯೆಗಳನ್ನು ಸರಿಪಡಿಸುವಂತೆ ಒತ್ತಾಯಿಸಿದರು.