ದಾಮೋದರ ನಾಗಪಟ್ಟಣ ನಿಧನ

0

ಆಲೆಟ್ಟಿ ಗ್ರಾಮದ ನಾಗಪಟ್ಟಣ ಸಿ.ಆರ್.ಸಿ ಕಾಲನಿ‌ ನಿವಾಸಿ ದಾಮೋದರ ರವರು ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಜು.21 ರಂದು ನಿಧನರಾದರು. ಅವರಿಗೆ 49 ವರ್ಷ ವಯಸ್ಸಾಗಿತ್ತು.

ಅವರು ಕಳೆದ ಕೆಲ ದಿನಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು ಅವರನ್ನು ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.
ಮೃತರು ಪತ್ನಿ ಶ್ರೀಮತಿ ವಸಂತ,ಪುತ್ರಿಯರಾದ ಶ್ರೀಮತಿ ನಿರೋಷಾ, ಕು.ದರ್ಶಿನಿ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.
ಮೃತರು ಕೆ.ಎಫ್.ಡಿ.ಸಿ ಯಲ್ಲಿ ಕಳೆದ ಹಲವಾರು ವರ್ಷಗಳಿಂದ ಸೆಕ್ಯೂರಿಟಿ ಕೆಲಸ ನಿರ್ವಹಿಸುತ್ತಿದ್ದರು. ಉತ್ತಮ ವಾಲಿಬಾಲ್ ಆಟಗಾರರಾಗಿ ಗುರುತಿಸಿಕೊಂಡಿದ್ದು ಲಿಫ್ಟ್ ದಾಮೋದರ ಎಂದು ಹೆಸರುವಾಸಿಯಾಗಿದ್ದರು.