ಸುಳ್ಯ ಸಮೂಹ ಸಂಪನ್ಮೂಲ ಕೇಂದ್ರದ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಮಮತಾ ರವೀಶ್ ಪಡ್ಡಂಬೈಲು ಇವರಿಗೆ ಆರ್.ಪಿ ಕಲಾ ಸೇವಾ ಟ್ರಸ್ಟ್ ವತಿಯಿಂದ ಸಾಹಿತ್ಯ ಕಣ್ಮಣಿ ಪ್ರಶಸ್ತಿ ಪ್ರದಾನ

0

ಸುಳ್ಯ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ಕೇಂದ್ರದ ಶಿಕ್ಷಕಿ ಮಮತಾ ಕೆ ಯವರಿಗೆ ಪಾಂಬಾರು ಆರ್.ಪಿ ಕಲಾ ಸೇವಾ ಟ್ರಸ್ಟ್ ವತಿಯಿಂದ “ಸಾಹಿತ್ಯ ಕಣ್ಮಣಿ” ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇವರು ಹಾಡು,ಭಾಗವತಿಕೆ,ಕ್ರಾಫ್ಟ್,ಕವನ ರಚನೆ ಇಂತಹ ಹಲವಾರು ಚಟುವಟಿಕೆಗಳಲ್ಲಿ ಆಸಕ್ತಿ ಹೊಂದಿದ್ದು ಮಕ್ಕಳ ಬೇಸಿಗೆ ಶಿಬಿರದಲ್ಲಿಯೂ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿರುತ್ತಾರೆ.


ಇವರ ವಿವಿಧ ಕಲಾಸಕ್ತಿಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಯಿತು. ಪೆರ್ಲಂಪಾಡಿಯ ಅಂಬೇಡ್ಕರ್ ಭವನದಲ್ಲಿ ಜು.21 ರಂದು ನಡೆದ ಗ್ರ್ಯಾಂಡ್ ಫಿನಾಲೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ನೀಡಲಾಯಿತು.ಈ ಸಂದರ್ಭದಲ್ಲಿ ಹಲವಾರು ಜನ ಗಣ್ಯರು ಉಪಸ್ಥಿತರಿದ್ದರು.