ಎಲಿಮಲೆ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟ – ಪೂರ್ವಭಾವಿ ಸಭೆ-ನೂತನ ಸಮಿತಿ ರಚನೆ

0

2024-25ನೇ ಸಾಲಿನ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕ್ರೀಡಾಕೂಟವು ಸರಕಾರಿ ಪ್ರೌಢಶಾಲೆ ಎಲಿಮಲೆಯಲ್ಲಿ ಆಯೋಜಿಸುವ ಬಗ್ಗೆ ಪೂರ್ವಭಾವಿ ಸಭೆಯು ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷ ಶೈಲೇಶ್ ಅಂಬೆಕಲ್ಲುರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಕ್ರೀಡಾಕೂಟದ ಸಂಘಟನಾ ಸಮಿತಿಯನ್ನು ರಚಿಸಿಕೊಳ್ಳಲಾಯಿತು. ಅಧ್ಯಕ್ಷರಾಗಿ ವಿಷ್ಣು ಭಟ್ ಮೂಲೆತೋಟ, ಕಾರ್ಯದರ್ಶಿಯಾಗಿ ರಂಜಿತ್ ಅಂಬೆಕಲ್ಲು ಆಯ್ಕೆಯಾದರು. ಹಾಗೂ ವಿವಿಧ ಸಮಿತಿಗಳನ್ನು ರಚಿಸಿ ಸಂಚಾಲಕರು ಮತ್ತು ಸದಸ್ಯರನ್ನು ಆಯ್ಕೆ ಮಾಡಲಾಯಿತು.


ವೇದಿಕೆಯಲ್ಲಿ ಎಸ್ ಡಿ ಎಮ್ ಸಿ ಅಧ್ಯಕ್ಷ ಧನಂಜಯ ಬಾಳೆತೋಟ, ದೇವಚಳ್ಳ ಗ್ರಾಮ ಪಂಚಾಯತ್ ಸದಸ್ಯ ದುರ್ಗಾದಾಸ್ ಮೆತ್ತಡ್ಕ ಮತ್ತು ಪ್ರಶಾಂತ್ ಮೆದು, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಮೂಲೆತೋಟ, ಜ್ಞಾನದೀಪ ವಿದ್ಯಾಸಂಸ್ಥೆಯ ಸಂಚಾಲಕರಾದ ಎ.ವಿ. ತೀರ್ಥರಾಮ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಿರಣ್ ಗುಡ್ಡೆಮನೆ, ಕಾರ್ಯದರ್ಶಿ ಜಯಂತ ತಳೂರು, ಎಸ್ ಡಿ ಎಂ ಸಿ ಯ ನಿಕಟಪೂರ್ವ ಅಧ್ಯಕ್ಷ ಪುರುಷೋತ್ತಮ ಕಜೆ, ಜಯಂತ ಹರ್ಲಡ್ಕ, ಜ್ಞಾನದೀಪ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕ ಗದಾಧರ ಬಾಳುಗೋಡು , ಜೊತೆ ಕಾರ್ಯದರ್ಶಿ ಜೀವನ್ ತಳೂರು ಉಪಸ್ಥಿತರಿದ್ದರು.

ಸಭೆಯಲ್ಲಿ ಹಿರಿಯ ವಿದ್ಯಾರ್ಥಿಗಳು, ಪೋಷಕರು, ವಿದ್ಯಾಭಿಮಾನಿಗಳು ಹಾಗೂ ದೈಹಿಕ ಶಿಕ್ಷಕ ಶಿಕ್ಷಕರು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸಂಧ್ಯಾ ಕೆ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ತಿರುಮಲೇಶ್ವರಿ ಯು. ಎಸ್. ವಂದಿಸಿದರು. ಮುರಳೀಧರ ಪುನುಕುಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು.