ನಾಲ್ಕೂರು : ಸಂಪೂರ್ಣ ಸುರಕ್ಷಾ ಆರೋಗ್ಯ ವಿಮೆ ಚೆಕ್ ವಿತರಣೆ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಹಾಲೆಮಜಲು ಒಕ್ಕೂಟದ ಸ್ಕಂಧಶ್ರೀ ಸಂಘದ ಸದಸ್ಯರಾದ ದಾಮೋದರ ಕುಂಭಡ್ಕ ರವರ ಪತ್ನಿಯು ಅನಾರೋಗ್ಯದಿಂದಿದ್ದು, ಅವರ ಚಿಕಿತ್ಸೆಗಾಗಿ ಸಂಪೂರ್ಣ ಸುರಕ್ಷಾ ಆರೋಗ್ಯ ವಿಮೆಯಿಂದ ಮಂಜೂರಾದ ಚೆಕ್ಕನ್ನು ಒಕ್ಕೂಟದ ಅಧ್ಯಕ್ಷರಾದ ಲೋಹಿತ್ ಚೆಮ್ನೂರ್ ರವರು ವಿತರಿಸಿದರು.

ಈ ಸಂದರ್ಭದಲ್ಲಿ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಕ್ಯಾಪ್ಟನ್ ಸತೀಶ್ ಬಂಬುಳಿ, ವಲಯ ಮೇಲ್ವಿಚಾರಕ ಬಾಲಕೃಷ್ಣ ಗೌಡ, ಸೇವಾಪ್ರತಿನಿಧಿ ಹರಿಶ್ಚಂದ್ರ ಕುಳ್ಳಂಪ್ಪಾಡಿ ಉಪಸ್ಥಿತರಿದ್ದರು.