ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಗಲಭೆಯಲ್ಲಿ ಭಾಗಿಯಾಗಿಲ್ಲವೆಂದು ಯುವಕರಿಂದ ಕಲ್ಕುಡ ದೈವಸ್ಥಾನದಲ್ಲಿ ಪ್ರಾರ್ಥನೆ

0

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆಯಾದ ನಂತರದ ಯಾವುದೇ ಗಲಭೆಗಳಲ್ಲಿ ನಾವು ಭಾಗಿಯಾಗಿರುವುದಿಲ್ಲ. ನಮ್ಮ ಮೇಲೆ ಸುಳ್ಳು ಕೇಸು ದಾಖಲಿಸಿದ್ದಾರೆ‌ ಎಂದು13 ಮಂದಿ ಯುವಕರು ಸುಳ್ಯದ ಕಲ್ಕುಡ ದೈವಸ್ಥಾನದಲ್ಲಿ ಜು.22ರಂದು ಪ್ರಾರ್ಥನೆ ಸಲ್ಲಿಸಿದ್ದಾರೆ.


ನಂದಕುಮಾರ್, ಕಮಲಾಕ್ಷ, ಅರುಣ್ ರೈ, ಪದ್ಮನಾಭ ತಡಗಜೆ, ಪ್ರಶಾಂತ್, ಆನಂದ ಯು.,ಧರ್ಮಪಾಲ, ಚಿದಾನಂದ ಬಾಳಿಲ, ಹರೀಶ್ ಬಾಳಿಲ, ಡಿಪಿನ್ ಎಡಮಂಗಲ, ಶಿವಾನಂದ, ಹರ್ಷಿತ್, ನಿತೀಶ್ ಕೆ.ಯವರ ಮೇಲೆ ಕೇಸು ದಾಖಲಾಗಿರುವುದಾಗಿ, ನಾವು ಯಾರು ಈ ಘಟನೆಗಳಲ್ಲಿ ಭಾಗಿಯಾಗಿರುವುದಿಲ್ಲವೆಂದು ಹಿಂದೂ ಮುಖಂಡ ಶಿವ ಪೂಜಾರಿ ಯವರ ನೇತೃತ್ವದಲ್ಲಿ ಪ್ರಾರ್ಥನೆ ಸಲ್ಲಿಸಿದರು. ದೈವಸ್ಥಾನದ ಅರ್ಚಕ ತಿಮ್ಮಪ್ಪ ನಾವೂರು ಉಪಸ್ಥಿತರಿದ್ದರು.