ಸುಬ್ರಹ್ಮಣ್ಯದಲ್ಲಿದ್ದ ಎರಡು ನಿರ್ಗತಿಕರು ಬೆಂಗಳೂರಿನ ಜನ ಸ್ನೇಹಿ ಕೇಂದ್ರಕ್ಕೆ

0

ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಮಾನಸಿಕ ಅಸ್ವಸ್ಥ ರಂತೆ ತಿರುಗಾಡುತಿದ್ದ ಇಬ್ಬರನ್ನು ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಮತ್ತಿತರರು ಸೇರಿ ಬೆಂಗಳೂರಿನ ಜನ ಸ್ನೇಹಿ ಆಶ್ರಮಕ್ಕೆ ಕಳುಹಿಸಿದ ಘಟನೆ ಜು.23 ರಂದು ನಡೆದಿದೆ.

ರವಿಕಕ್ಕೆಪದವು, ಶಿವ ಭಟ್, ರಾಧಾಕೃಷ್ಣ, ಹರೀಶ್ ಇಂಜಾಡಿ, ಗ್ರಾ.ಪಂ ಮತ್ತಿತರರು ಸೇರಿ ಈ ವ್ಯವಸ್ಥೆ ಮಾಡಿದರು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಆ್ಯಂಬುಲೆನ್ಸ್ ಅನಾಥರನ್ನು ಕಳುಹಿಸಿ ಕೊಡಲು ಬಳಸಲಾಯಿತು. ಈ ಬಗ್ಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿ ಎ.ಸಿ, ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಠಾಣೆಯ ಸಹಾಯ ಪಡೆಯಲಾಯಿತು.