ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸ್ವಸಹಾಯ ಸಂಘದ ಪದಾಧಿಕಾರಿಗಳಿಗೆ ತರಬೇತಿ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಜಾಲ್ಸೂರು ವಲಯದ ಹತ್ತು ಕಾರ್ಯಕ್ಷೇತ್ರದ 12 ಒಕ್ಕೂಟಗಳ ಪ್ರಗತಿ ಬಂದು ಸ್ವಸಹಾಯ ಸಂಘಗಳ ಪದಾಧಿಕಾರಿಗಳಿಗೆ ತರಬೇತಿ ಕಾರ್ಯಗಾರವು ಸುಳ್ಯ ತಾಲೂಕಿನ ಯೋಜನಾ ಕಚೇರಿ ಸಭಾಂಗಣದಲ್ಲಿ ಜು.24ರಂದು ನಡೆಯಿತು.

ಸುಳ್ಯ ತಾಲೂಕು ಯೋಜನಾಧಿಕಾರಿ ಮಾಧವ ಗೌಡ ಅವರು ಕಾರ್ಯಕ್ರಮವನ್ನು ಉದ್ವಾಟಿಸಿದರು.

ಬಳಿಕ ನಡೆದ ಮಾಹಿತಿ ಕಾರ್ಯಾಗಾರದಲ್ಲಿ ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್ ,ತಾಲೂಕು ಯೋಜನಾಧಿಕಾರಿ ಮಾಧವ ಗೌಡ, ತಾಲೂಕಿನ ಆಂತರಿಕ ಲೆಕ್ಕ ಪರಿಶೋಧಕರಾದ ಶ್ರೀಮತಿ ಅನಿತಾರವರು ಉಪಸ್ಥಿತರಿದ್ದು ಯೋಜನೆ ನಡೆದು ಬಂದ ಹಾದಿ ,ಒಕ್ಕೂಟದ ನಿರ್ವಹಣೆ , ಯೋಜನೆಯ ಬಡ್ಡಿ ಲೆಕ್ಕಾಚಾರ, ಯೋಜನೆಯ ವಿವಿಧ ಕಾರ್ಯಕ್ರಮಗಳ ಕುರಿತು ತರಬೇತಿಯಲ್ಲಿ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಪೈಲಾರ್ ಸೇವಾ ಪ್ರತಿನಿಧಿ ಚಂದ್ರಪ್ರಕಾಶ್ ಸ್ವಾಗತಿಸಿ, ಜಾಲ್ಸೂರು ವಲಯ ಮೇಲ್ವಿಚಾರಕ ತೀರ್ಥರಾಮ ಅವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು‌.
ಈ ಸಂದರ್ಭದಲ್ಲಿ ವಲಯದ ಎಲ್ಲಾ ಒಕ್ಕೂಟಗಳ ಪದಾಧಿಕಾರಿಗಳು ಉಪಸ್ಥಿತರಿದ್ದು ತರಬೇತಿ ಪಡೆದುಕೊಂಡರು. ವಲಯದ ಎಲ್ಲಾ ಸೇವಾ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.