ಸೊಣಂಗೇರಿ: ಸಂಪೂರ್ಣ ಸುರಕ್ಷಾ ಸಹಾಯಧನ ವಿತರಣೆ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸುಳ್ಯ ತಾಲೂಕು ಜಾಲ್ಸೂರು ವಲಯದ ಸೋಣಂಗೇರಿ ಒಕ್ಕೂಟದ ಸಂಘದ ಸದಸ್ಯೆ ಶ್ರೀಮತಿ ಚಂದ್ರಕಲಾ ಅವರ ಪತಿ ರಾಘವ ಅವರಿಗೆ ಅನಾರೋಗ್ಯ ನಿಮಿತ್ತ ಶ್ರೀ.ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಂಜೂರಾದ ರೂ. ಮೂವತ್ತು ಸಾವಿರವನ್ನು ಸಂಘದ ಸಂಪೂರ್ಣ ಸುರಕ್ಷಾ ಕಾರ್ಯಕ್ರಮದಡಿಯಲ್ಲಿ ಜು.26ರಂದು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಯತೀಶ್ ರೈ ದುಗಲಡ್ಕ ಸೊಣಂಗೇರಿ ಒಕ್ಕೂಟ ಅಧ್ಯಕ್ಷ ಗಿರಿಧರ ನಾಯರ್ ಹಿತ್ಲು ದುಗಲಡ್ಕ ಒಕ್ಕೂಟದ ಅಧ್ಯಕ್ಷ ರಾಘವ ಆಚಾರ್ಯ, ಜಾಲ್ಸೂರು ವಲಯ ಮೇಲ್ವಿಚಾರಕ ತೀರ್ಥರಾಮ ಮತ್ತು ಸೇವಾಪ್ರತಿನಿಧಿ ಶ್ರೀಮತಿ ಸೌಮ್ಯ ಉಪಸ್ಥಿತರಿದ್ದರು.