ಸುಳ್ಯ : ಸ್ಕೂಟಿಗೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ ಕಾರು ಚಾಲಕ

0

ಬೆನ್ನಟ್ಟಿ ಹಿಡಿದ ಸ್ಥಳೀಯರು

ಸುಳ್ಯ ಸ್ಕೂಟಿಯಲ್ಲಿ ಹೋಗುತಿದ್ದ ಮಹಿಳೆಗೆ ಕಾರು ಡಿಕ್ಕಿ ಹೊಡೆದು ಚಾಲಕ ಪರಾರಿಯಾಗಲು ಯತ್ನಿಸಿದ್ದು ಸ್ಥಳೀಯರು ಕೂಡಲೇ ಆತನನ್ನು ಬೆನ್ನಟ್ಟಿ ಹಿಡಿದ ಘಟನೆ ಜು. 27 ರಂದು ರಾತ್ರಿ ನಡೆದಿದೆ.

ಸುಳ್ಯದ ಖಾಸಗಿ ಬಸ್ಸು ನಿಲ್ದಾಣ ಬಳಿ ಮಹಿಳೆಯೊಬ್ಬರು ಸ್ಕೂಟಿ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಎದುರುಗಡೆಯಿಂದ ಬಂದ ಅಲ್ಟೋ ಕಾರೋಂದು ಸ್ಕೂಟಿಗೆ ಡಿಕ್ಕಿ ಹೊಡೆದು ಚಾಲಕ ಕಾರು ನಿಲ್ಲಿಸದೆ ಅಲ್ಲಿಂದ ಪರಾರಿಯಾಗಲು ಯತ್ನಿಸಿದ.

ಆದರೆ ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಕಾರನ್ನು ಬೆನ್ನಟ್ಟಿ ಹಿಡಿದು ಆತನನ್ನು ಘಟನಾ ಸ್ಥಳಕ್ಕೆ ಕರೆ ತಂದಿದ್ದು ಸ್ಥಳಕ್ಕೆ ಬಂದ ಪೊಲೀಸರು ಆತನನ್ನು ಠಾಣೆಗೆ ಕರೆದೊಯ್ದಿದ್ದಾರೆ.

ಕಾರು ಚಾಲನೆ ಮಾಡುತ್ತಿದ್ದ ವ್ಯಕ್ತಿ ದೊಡ್ಡತೋಟ ನಿವಾಸಿ ಸಂದೀಪ್ ಎಂದು ಗುರುತಿಸಲಾಗಿದ್ದು
ಅಪಘಾತಕ್ಕೀಡಾದ ಮಹಿಳೆ ಬೀರಮಂಗಲ ನಿವಾಸಿ ಹಾಗೂ ಸ್ಥಳೀಯ ಶಾಲೆಯೊಂದರ ಶಿಕ್ಷಕಿ.

ಘಟನೆಯಿಂದ ಸ್ಕೂಟಿಯ ಮುಂಭಾಗ ಅಲ್ಪ ಜಖಂ ಗೊಂಡಿದ್ದು ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.