ಆ.3: ಪಂಜದಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ಯೋಗೀಶ್ ಚಿದ್ಗಲ್ಲುರಿಗೆ ಬೀಳ್ಕೊಡುಗೆ ಕಾರ್ಯಕ್ರಮ

0

ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಪಂಜ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಯೋಗೀಶ್ ಚಿದ್ಗಲ್ ಸನ್ಮಾನ ಸಮಿತಿ ಇದರ ಸಹಯೋಗದೊಂದಿಗೆ 39
ವರುಷ ಸುದೀರ್ಘ ಸೇವೆ ಸಲ್ಲಿಸಿ ಜು.31 ರಂದು ಸೇವಾ ನಿವೃತ್ತಿ ಹೊಂದಲಿರುವ ಯೋಗೀಶ್ ಚಿದ್ಗಲ್ ರವರ ಬೀಳ್ಕೊಡುಗೆ ಕಾರ್ಯಕ್ರಮ ಆ.3 ರಂದು ಪಂಜ ಸರಕಾರಿ ಪದವಿ ಪೂರ್ವ ಕಾಲೇಜುನಲ್ಲಿ ನಡೆಯಲಿದೆ.

ಸನ್ಮಾನ ಸಮಿತಿ ಅಧ್ಯಕ್ಷ ಮಾಧವ ಬಿ ಕೆ ಸಭಾಧ್ಯಕ್ಷತೆ ವಹಿಸಲಿದ್ದಾರೆ.
ವಿಶ್ರಾಂತ ದೈಹಿಕ ಶಿಕ್ಷಣ ಶಿಕ್ಷಕ ಯೋಗೀಶ್ ಚಿದ್ಗಲ್ ಸನ್ಮಾನ ಸ್ವೀಕರಿಸಲಿದ್ದಾರೆ.ಪದವಿ ಪೂರ್ವ ಶಿಕ್ಷಣ ಇಲಾಖೆ ನಿವೃತ್ತ ಉಪ ನಿರ್ದೇಶಕಿ ಶ್ರೀಮತಿ ಶೀಲಾವತಿ ಕೊಳಂಬೆ ಸನ್ಮಾನಿಸಲಿದ್ದಾರೆ. ಸುಳ್ಯ ಸುದ್ದಿ ಚಾನೆಲ್ ಮುಖ್ಯಸ್ಥ ದುರ್ಗ ಕುಮಾರ ನಾಯರ್ ಕೆರೆ ಅಭಿನಂದನಾ ಭಾಷಣ ಮಾಡಲಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ವಿಶ್ರಾಂತ ರಿಜಿಸ್ಟ್ರಾರ್, ನಿವೃತ್ತ ಉಪನ್ಯಾಸಕ ಚಂದ್ರಹಾಸ ರೈ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಮತಿ ವಿಜಯಲಕ್ಷ್ಮಿ ಜಳಕದಹೊಳೆ, ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ ಇ, ದೈಹಿಕ ಶಿಕ್ಷಣ ಪರಿವೀಕ್ಷಾಣಾಧಿಕಾರಿ ಶ್ರೀಮತಿ ಆಶಾ ನಾಯಕ್ , ಶಿಕ್ಷಣ ಸಮನ್ವಯ ಅಧಿಕಾರಿ ಶ್ರೀಮತಿ ಶೀತಲ್ ಯು ಕೆ, ಪ್ರಾಂಶುಪಾಲ ವೆಂಕಪ್ಪ ಗೌಡ ಕೆನಾಜೆ, ಮುಖ್ಯ ಶಿಕ್ಷಕ ಪುರಂದರ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸವಿತಾರ ಮುಡೂರು, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಚಿನ್ನಪ್ಪ ಕಾಣಿಕೆ, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಸೋಮಶೇಖರ ಬಿ ಉಪಸ್ಥಿತರಿರುವರು.