ಯೋಗಸ್ಪರ್ಧೆ : ಜ್ಞಾನದೀಪ ವಿದ್ಯಾ ಸಂಸ್ಥೆ ಎಲಿಮಲೆಯ ತನುಷ್ ರಾಜ್ಯ ಮಟ್ಟಕ್ಕೆ ಆಯ್ಕೆ

0

ವಿದ್ಯಾಭಾರತಿ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ನಡೆದ ಜಿಲ್ಲಾಮಟ್ಟದ ಯೋಗ ಸ್ಪರ್ಧೆಯಲ್ಲಿ ಜ್ಞಾನದೀಪ ವಿದ್ಯಾಸಂಸ್ಥೆ ಎಲಿಮಲೆಯ ತನುಷ್ ಎಂ ಎಚ್ ಎಂಟನೇ ತರಗತಿ ಇವರು ಜುಲೈ 30 ರಂದು ಸರಸ್ವತಿ ವಿದ್ಯಾಲಯ ಕಡಬದಲ್ಲಿ ನಡೆದ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನಗಳಿಸಿರುತ್ತಾರೆ.

ಇವರು ಆಗಸ್ಟ್ 1 ಮತ್ತು 2 ರಂದು ಸರಸ್ವತಿ ವಿದ್ಯಾಲಯ ಸಿದ್ದಾಪುರ, ಕುಂದಾಪುರ ಇಲ್ಲಿ ನಡೆಯುವ ರಾಜ್ಯ ಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇವರು ಹರೀಶ್ ಮತ್ತು ಭವಾನಿ ಮೋಂಟಡ್ಕ ಇವರ ಪುತ್ರ.