ಪರಿವಾರಕಾನ : ವೀಲ್ ಚಯರ್ ವಿತರಣೆ

0

ಪರಿವಾರಕಾನ ಕಾರ್ಯಕ್ಷೇತ್ರದ ನವ್ಯಶ್ರೀ ಸ್ವಸಹಾಯ ಸಂಘದ ಸದಸ್ಯಯಾದ ಶಾರದರವರ ಅತ್ತೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸುಳ್ಯ ತಾಲೂಕು ಜನ ಮಂಗಳ ಕಾರ್ಯಕ್ರಮದ ಅಡಿಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ ವೀರೇಂದ್ರ ಹೆಗಡೆಯವರು ಮಂಜೂರು ಮಾಡಿದ ವೀಲ್ ಚಯರ್ ವಿತರಣೆಯನ್ನು ಆಲೇಟಿ ಗ್ರಾಮ ಪಂಚಾಯತ್ ಸದಸ್ಯರಾದ ರತಿಶನ್ ಅರಂಬೂರು ವಿತರಿಸಿದರು.

ಈ ಸಂದರ್ಭದಲ್ಲಿ ಸುಳ್ಯ ವಲಯದ ಮೇಲ್ವಿಚಾರಕರಾದ ಜಯಶ್ರೀ ಪರಿವಾರಕಾನ ಒಕ್ಕೂಟದ ಅಧ್ಯಕ್ಷರಾದ ಬಾಲಚಂದ್ರ ಸರಳಿಕುಂಜ ಒಕ್ಕೂಟದ ಕೋಶಾಧಿಕಾರಿ ಯೋಗೀಶ್ ಪರಿವಾರಕಾನ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಸುರೇಶ್ ರವರು ಉಪಸ್ಥಿತರಿದ್ದರು.