ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬೆಳ್ಳಾರೆಯ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ರೂ. 5ಲಕ್ಷ ಅನುದಾನ ಕೊಡುಗೆ

0

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಬೆಳ್ಳಾರೆಯ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ರೂ. 5ಲಕ್ಷ ಅನುದಾನವನ್ನು ಒದಗಿಸಿದ್ದು, ಚಕ್ ಹಸ್ತಾಂತರ ಕಾರ್ಯಕ್ರಮ ಆ. 2ರಂದು ದೇವಸ್ಥಾನದ ವಠಾರದಲ್ಲಿ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕರಾದ ಪ್ರವೀಣ್ ಕುಮಾರ್ ಮತ್ತು ಯೋಜನಾಧಿಕಾರಿ ಮಾಧವ ಗೌಡ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ನಾಯಕ್ ಪೊಸವಳಿಗೆ ಪಂಜಿಗಾರು ಮತ್ತು ಆಡಳಿತ ಮಂಡಳಿ ಅಧ್ಯಕ್ಷ ಚಂದ್ರಹಾಸ ಮಣಿಯಾಣಿ ಪಡ್ಪು ಮತ್ತು ಸಮಿತಿ ಪದಾಧಿಕಾರಿಗಳಿಗೆ ದೇಣಿಗೆಯನ್ನು ಹಸ್ತಾಂತರಿಸಿದರು.


ಬೆಳ್ಳಾರೆಯಲ್ಲಿ ನಡೆದ ಮದ್ಯವ್ಯರ್ಜನ ಶಿಬಿರದ ಅಧ್ಯಕ್ಷೆ ಶ್ರೀಮತಿ ರಾಜೀವಿ ಆರ್. ರೈ ಬೆಳ್ಳಾರೆ ಮತ್ತು ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷ ಮಿಥುನ್ ಶೆಣೈ ಬೆಳ್ಳಾರೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ
ಪ್ರದೀಪ್ ಕುಮಾರ್ ರೈ ಪನ್ನೆ ಕಾರ್ಯಕ್ರಮ ನಿರೂಪಿಸಿದರು.

ಜನ ಜಾಗೃತಿ ಅಧ್ಯಕ್ಷ ಆನಂದ ಗೌಡ ಬೆಳ್ಳಾರೆ, ವಲಯದ ಮೇಲ್ವಿಚಾರಕರಾದ ವಿಶಾಲ ಕೆ, ವಲಯ ಅಧ್ಯಕ್ಷರಾದ ವೇದ ಹೆಚ್. ಶೆಟ್ಟಿ, ಸೇವಾ ಪ್ರತಿನಿಧಿ ಯಶೋಧ, ಒಕ್ಕೂಟದ ಪದಾಧಿಕಾರಿಗಳಾದ ಶ್ರೀಮತಿ ವೀಣಾ, ವೇದಾವತಿ, ಪೆರುವಾಜೆ ಒಕ್ಕೂಟದ ಅಧ್ಯಕ್ಷ ಸುಂದರ ನಾಯ್ಕ, ಕೊಡಿಯಾಲ ಒಕ್ಕೂಟದ ಅಧ್ಯಕ್ಷ ಗೋವರ್ಧನ, ಕಳಂಜ ಒಕ್ಕೂಟದ ಅಧ್ಯಕ್ಷ ನಾರಾಯಣ, ಪ್ರಗತಿಬಂಧು ಸಂಘಗಳ ಕೇಂದ್ರ ನಿಕಟಪೂರ್ವಾಧ್ಯಕ್ಷ ಮಲ್ಲೇಶ್ ಬೆಟ್ಟಂಪಾಡಿ ಸೇರಿದಂತೆ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ, ಆಡಳಿತ ಸಮಿತಿ ಪದಾಧಿಕಾರಿಗಳು ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.