ಪಂಜ: ನಾಗಮಣಿ ಕೆದಿಲರಿಗೆ ಸಾಧನಶ್ರೀ ಪ್ರಶಸ್ತಿ

0


ಮಂಗಳೂರಿನಲ್ಲಿ ನಡೆದ ಜೇಸಿಐ ಭಾರತದ ವಲಯ15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಜೇಸಿ ನಾಗಮಣಿ ಕೆದಿಲ ರಿಗೆ ಸಾಧನಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಜೇಸಿಐ ಪಂಜ ಪಂಚಶ್ರೀಯ ಪೂರ್ವಾಧ್ಯಕ್ಷರಾಗಿರುವ ಇವರು ಘಟಕದ ಬೆಳವಣಿಗೆಗೆ ನಿರಂತರ ಕೊಡುಗೆ ನೀಡುತ್ತಿರುವುದು ಮಾತ್ರವಲ್ಲದೆ ಕೃಷಿ ಚಟುವಟಿಕೆಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡವರು.ಘಟಕದ ಪೂರ್ವಾಧ್ಯಕ್ಷರುಗಳು ಮತ್ತು ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.