ವಿರಾಟ್ ಫ್ರೆಂಡ್ಸ್ ಬೆಳ್ಳಾರೆ ವತಿಯಿಂದ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಸಾರ್ವಜನಿಕ ಸಾಂಸ್ಕೃತಿಕ ಗಣೇಶೋತ್ಸವ ಸಮಿತಿ, ವಿರಾಟ್ ಫ್ರೆಂಡ್ಸ್ ಬೆಳ್ಳಾರೆ ವತಿಯಿಂದ 53 ವರ್ಷದ ಗಣೇಶೋತ್ಸವವು ಸೆ.7 ಮತ್ತು 8 ರಂದು ನಡೆಯಲಿದ್ದು ಆಮಂತ್ರಣ ಬಿಡುಗಡೆಯು ಆ.3 ರಂದು ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.
ದೇವಸ್ಥಾನದ ಪ್ರಧಾನ ಅರ್ಚಕ ಉದಯಕುಮಾರ್ ಕೆ.ಟಿ.ಪೂಜಾ ಕಾರ್ಯ ನೆರವೇರಿಸಿದರು.
ಈ ಸಂದರ್ಭದಲ್ಲಿ ವಿರಾಟ್ ಫ್ರೆಂಡ್ಸ್ ಅಧ್ಯಕ್ಷ ಸಂತೋಷ್ ಮಣಿಯಾಣಿ ಬೆಳ್ಳಾರೆ, ಕಾರ್ಯದರ್ಶಿ ಜೀವನ್ ಕಲ್ಲೋಣಿ,ಗೌರವಾಧ್ಯಕ್ಷ ಮಿಥುನ್ ಶೆಣೈ,ಉಪಾಧ್ಯಕ್ಷ ಸನತ್ ಕಲ್ಲೋಣಿ, ದಾಮೋದರ ತಡಗಜೆ,ರಂಜನ್ ತಡಗಜೆ,ಕಿರಣ ರೈ ಅಗಲ್ಪಾಡಿ,ಪ್ತದೀಪ್ ರೈ ಅಜ್ರಂಗಳ,ಸಚಿನ್ ರಾಜ್ ಶೆಟ್ಟಿ ಪೆರುವಾಜೆ, ದೇವಸ್ಥಾನದ ಕಚೇರಿ ವ್ಯವಸ್ಥಾಪಕ ಮಹೇಶ್ ಕಲ್ಲಪಣೆ ಮತ್ತಿತರರು ಉಪಸ್ಥಿತರಿದ್ದರು.