ಸುಳ್ಯ ಶಿವಳ್ಳಿ ಸಂಪನ್ನ ಮಹಾಸಭೆ, ಪ್ರತಿಭಾ ಪುರಸ್ಕಾರ

0


ಸುಳ್ಯ ತಾಲೂಕು ಶಿವಳ್ಳಿ ಸಂಪನ್ನದ ಮಹಾಸಭೆ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಕ್ಕಳನ್ನು ಪುರಸ್ಕರಿಸುವ ಕಾರ್ಯಕ್ರಮ ಇಲ್ಲಿನ ಶ್ರೀಗುರು ರಾಘವೇಂದ್ರ ಮಠದಲ್ಲಿ ನಡೆಯಿತು.


ಸಭಾಧ್ಯಕ್ಷತೆಯನ್ನು ಶಿವಳ್ಳಿ ಸಂಪನ್ನದ ಅಧ್ಯಕ್ಷ ರಾಮಕುಮಾರ್ ಹೆಬ್ಬಾರ್ ವಹಿಸಿದ್ದರು.
ಕಾರ್ಯದರ್ಶಿ ನವೀನ್ ಸೋಮಯಾಗಿ ಅವರು ವರದಿ ಮತ್ತು ಲೆಕ್ಕಪತ್ರ ಮಂಡಿಸಿದರು. ವಿವೇಕಾನಂದ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಗೋಪಾಲ್ ರಾವ್ ಸಾಧಕರನ್ನು ಗೌರವಿಸಿದರು.


ರಾಯರ ಮಠದ ಅಧ್ಯಕ್ಷ ಎಂ.ಎನ್.ಶ್ರೀಕೃಷ್ಣ ಸೋಮಯಾಗಿ ಅವರು ಮಾತನಾಡಿ ರಾಯರ ಮಠದ ಅಭಿವೃದ್ಧಿಗೆ ಸಹಕಾರ ಕೋರಿದರು. ವಿದ್ಯಾರ್ಥಿ ಪರಿಷತ್‌ನ ಅಧ್ಯಕ್ಷ ಅಖಿಲ್ ಸೋಮಯಾಗಿ ಉಪಸ್ಥಿತರಿದ್ದರು.
ಸಂಚಾಲಕ ಪ್ರಕಾಶ್ ಮೂಡಿತ್ತಾಯ ಅವರು ಅಭಿನಂದನಾ ಮಾತುಗಳನ್ನಾಡಿದರು. ಮಮತಾ ಬೈಪಾಡಿತ್ತಾಯ ಮತ್ತು ಮಮತಾ ಮೂಡಿತ್ತಾಯ ನಿರೂಪಿಸಿದರು.