ವಿಶ್ವ ಹಿಂದೂ ಪರಿಷದ್ ಸ್ಥಾಪನ ದಿನದ 11ನೇ ವರ್ಷದ ಸುಳ್ಯ ಮೊಸರು ಕುಡಿಕೆ ಉತ್ಸವ ಸಮಿತಿ ರಚನೆ

0

ಅಧ್ಯಕ್ಷರಾಗಿ ಎ.ವಿ. ತೀರ್ಥರಾಮ – ಪ್ರಧಾನ ಕಾರ್ಯದರ್ಶಿಯಾಗಿ ಪ್ರಕಾಶ್ ಯಾದವ್ – ಕೋಶಾಧಿಕಾರಿಯಾಗಿ ನವೀನ್ ಎಲೆಮಲೆ ಆಯ್ಕೆ

ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪನೆಗೊಂಡ ವಿಶ್ವ ಹಿಂದೂ ಪರಿಷತ್ ಸ್ಥಾಪನ ದಿನದ ಪ್ರಯುಕ್ತ ಹಲವು ವರ್ಷಗಳಿಂದ ಸುಳ್ಯದಲ್ಲಿ ವಿಜೃಂಭಣೆಯಿಂದ ನಡೆಯುವ ಸುಳ್ಯ ಮೊಸರು ಕುಡಿಕೆ ಉತ್ಸವದ 11ನೇ ವರ್ಷದ ಮೊಸರು ಕುಡಿಕೆ ಉತ್ಸವದ ಸಭೆಯು ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ಸಭಾಂಗಣದಲ್ಲಿ ಆ.4ರಂದು ನಡೆಯಿತು.

ಅಧ್ಯಕ್ಷರಾಗಿ ಎ.ವಿ. ತೀರ್ಥರಾಮ ಅಂಬೆಕಲ್ಲು, ಕಾರ್ಯದರ್ಶಿಯಾಗಿ ಪ್ರಕಾಶ್ ಯಾದವ್, ಕೋಶಾಧಿಕಾರಿಯಾಗಿ ನವೀನ್ ಎಲಿಮಲೆ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರುಗಳಾಗಿ ಸುನಿಲ್ ಕೇರ್ಪಳ, ರವಿಚಂದ್ರ ಕೊಡಿಯಾಲಬೈಲು, ದೇವಿ ಪ್ರಸಾದ್ ಅತ್ಯಾಡಿ ಆಯ್ಕೆಯಾಗಿದ್ದಾರೆ. ಸಹಕಾರ್ಯದರ್ಶಿಯಾಗಿ ಪಾರ್ವತಿ ಕುಂಚಡ್ಕ , ರಾಜೇಶ್ ಬೇರಿಕೆ. ವ್ಯವಸ್ಥಾ ಪ್ರಮುಖ ಆಗಿ ರಾಜೇಶ್ ಕಲ್ಲುಮಟ್ಲು, ವಿನಯ್ ಪಾಡಾಜೆ ಆಯ್ಕೆಯಾಗಿದ್ದಾರೆ . ಆಯ್ಕೆ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ , ಭಜರಂಗದಳ, ದುರ್ಗವಾಹಿನಿ , ಮಾತೃಶಕ್ತಿಯ ಪ್ರಮುಖರು ಹಾಗೂ ಜಿಲ್ಲಾ ಪದಾಧಿಕಾರಿ ಉಪಸ್ಥಿತರಿದ್ದರು.