ಅಮರ ಸಂಘಟನೆಯ ವತಿಯಿಂದ ಅನಾರೋಗ್ಯ ಪೀಡಿತ ಆನಂದರಿಗೆ ಸಹಾಯ ಹಸ್ತ

0

ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕ ನಿವಾಸಿ ಆನಂದ ರವರು ಅನಾರೋಗ್ಯದಿಂದ ಬಳಲುತ್ತಿದ್ದು ಅವರ ಚಿಕಿತ್ಸೆಗೆ ಸುಳ್ಯ ಅಮರ ಸಂಘಟನಾ ಸಮಿತಿ ವತಿಯಿಂದ ಸಹಾಯ
ಧನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ‌ ಸಾತ್ವಿಕ್ ಮಡಪ್ಪಾಡಿ ಹಾಗೂ ಪದಾಧಿಕಾರಿಗಳಾದ ಹರ್ಷಿತ್ ದಾತಡ್ಕ, ಜಯಪ್ರಸಾದ್ ಸಂಕೇಶ, ಮಿಥುನ್ ಕೆರೆಗದ್ದೆ, ಪ್ರವೀಣ್ ಕುಲಾಲ್, ಶಶಿಕಾಂತ್ ಮಿತ್ತೂರು, ಶಿವಪ್ರಸಾದ್ ದೊಡ್ಡಿಹಿತ್ಲು, ಸುಧೀರ್ ದೇವ, ಮಿಥುನ್ ಪೈಲಾರು ಜತೆಯಲ್ಲಿದ್ದರು.