ಕೆವಿಜಿ ಅಮರಜ್ಯೋತಿ ಪಿ.ಯು ಕಾಲೇಜಿನಲ್ಲಿ ಸಿಎ ಫೌಂಡೇಶನ್ ಓರಿಯೆಂಟೇಷನ್ ಕಾರ್ಯಕ್ರಮ

0

ಕೆವಿಜಿ ಅಮರಜ್ಯೋತಿ ಪಿ.ಯು. ಕಾಲೇಜಿನಲ್ಲಿ ಆ. 5ರಂದು ಚಾರ್ಟರ್ ಅಕೌಂಟೆಂಟ್ ಫೌಂಡೇಶನ್ ಓರಿಯೆಂಟೇಷನ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಚಾರ್ಟರ್ಡ್ ಅಕೌಂಟೆಂಟ್ ಶ್ರೀನಿಧಿ ದೇಂಗೋಡಿ ವಿದ್ಯಾರ್ಥಿಗಳಿಗೆ ಚಾರ್ಟರ್ಡ್ ಅಕೌಂಟೆಂಟ್ ಪದವಿಯ ಮಹತ್ವ ಹಾಗೂ ವಿವಿಧ ಸ್ತರಗಳಲ್ಲಿ ನಡೆಯುವ ರಾಷ್ಟ್ರ ಮಟ್ಟದ ಸಿಎ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ಹಾಗೂ ಯಶಸ್ಸನ್ನು ಗಳಿಸುವ ಕುರಿತು ಮನಮುಟ್ಟುವಂತೆ ವಿವರಿಸಿದರು.


ಕಾಲೇಜಿನ ಉಪನ್ಯಾಸಕ ಸಿಎ ಸಂಯೋಜಕರಾದ ದೀಕ್ಷಿತ್ ಎಂ.ಕೆ ಮಾತನಾಡಿ ಪ್ರಥಮ ವಾಣಿಜ್ಯ ವಿದ್ಯಾರ್ಥಿಗಳಿಗೆ ದಿನಾಂಕ 6 ಆಗಸ್ಟ್ 2024 ರಿಂದ ಸಿಎ ಫೌಂಡೇಶನ್ ತರಗತಿಗಳು ಪ್ರಾರಂಭವಾಗುವುದು. ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.


ಕಾಲೇಜಿನ ಉಪ ಪ್ರಾಂಶುಪಾಲರಾದ ದೀಪಕ್ ವೈ.ಆರ್ ಮಾತನಾಡಿ ಸಿಎ ಫೌಂಡೇಶನ್ ತರಗತಿಗಳಲ್ಲಿ ಗಣಿತ ವಿಷಯದ ಮಹತ್ವದ ಕುರಿತು ಮಾತನಾಡಿದರು.
ಕಾಲೇಜಿನ ವಿದ್ಯಾರ್ಥಿಗಳಾದ ಗಗನ್ ದೀಪ್ ಕಾರ್ಯಕ್ರಮ ನಿರೂಪಿಸಿದರು. ನಹೀಮ ತಸ್ನೀನ್ ಸ್ವಾಗತಿಸಿ, ರೀಫಾ ಫಾತಿಮಾ ವಂದಿಸಿದರು.


ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ಡಾ. ರೇಣುಕಾ ಪ್ರಸಾದ್ ಕೆ ವಿ,ಟ್ರಸ್ಟಿ ಡಾ. ಜ್ಯೋತಿ ಆರ್ ಪ್ರಸಾದ್ ಹಾಗೂ ಕಾಲೇಜಿನ ಸಿಇಒ ಡಾ. ಉಜ್ವಲ್ ಯು ಜೆ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.