ಕರ್ನಾಟಕ ಸರ್ಕಾರದ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಸದಸ್ಯರಾಗಿ ಕೆ.ಪಿ.ಜಾನಿ ಕಲ್ಲುಗುಂಡಿ ಮರುನೇಮಕ

0

ಕಾರ್ಮಿಕ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಪ್ರಥಮ ಸಭೆಯಲ್ಲಿ ಭಾಗಿ

ಸುಳ್ಯದ ಪ್ರಮುಖ ಕಾರ್ಮಿಕ ನಾಯಕ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಚಾರ ಸಮಿತಿಯ ಸಂಯೋಜಕರಾದ ಕೆ.ಪಿ.ಜಾನಿ ಕಲ್ಲುಗುಂಡಿಯವರನ್ನು ಕರ್ನಾಟಕ ಸರ್ಕಾರದ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ರಾಜ್ಯ ಸದಸ್ಯರನ್ನಾಗಿ ಮರುನೇಮಕಗೊಳಿಸಿ ಸರಕಾರ ಆದೇಶಿಸಿದ್ದು, ಆಗಸ್ಟ್ 7 ರಂದು ಬೆಂಗಳೂರಿನಲ್ಲಿರುವ ಮಂಡಳಿಯ ಕಚೇರಿಯಲ್ಲಿ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಪ್ರಥಮ ಸಭೆಯಲ್ಲಿ ಅವರು ಭಾಗಿಯಾದರು.