ಮಂಡ್ಯ : ಬಿಜೆಪಿ – ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ

0


ಸುದ್ದಿ ಜನಾಂದೋಲನದ ಫಲಕ ಸ್ವೀಕರಿಸಿ – ಬೆಂಬಲ ಸೂಚಿಸಿದ ರಾಜ್ಯಮಟ್ಟದ ನಾಯಕರುಗಳು


ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಗರಣದ ವಿರುದ್ಧ ರಾಜ್ಯ ಬಿಜೆಪಿ ಮತ್ತು ಜೆಡಿಎಸ್ ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆಯು ಮಂಡ್ಯದಲ್ಲಿ ಅದ್ಧೂರಿಯಾಗಿ ನಡೆಯುತ್ತಿದ್ದು, ಬಿಜೆಪಿ ಮತ್ತು ಜೆ.ಡಿ.ಎಸ್. ಪಕ್ಷದ ರಾಜ್ಯಮಟ್ಟದ ನಾಯಕರು ಸುದ್ದಿ ಜನಾಂದೋಲನದ ಲಂಚ – ಭ್ರಷ್ಟಾಚಾರ ವಿರೋಧಿ ಫಲಕ ಸ್ವೀಕರಿಸಿ, ಬೆಂಬಲ ಸೂಚಿಸಿದರು.


ಜೆಡಿಎಸ್ ಯುವ ಜನತಾ ದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರ ಸ್ವಾಮಿ, ಸಿರಗುಪ್ಪೆ ಮಾಜಿ ಶಾಸಕ ಸೋಮಲಿಂಗಪ್ಪ, ಪಾಂಡವಪುರ ತಾಲೂಕು ಬಿ ಜೆ ಪಿ ಹಾಗೂ ಜೆಡಿಎಸ್ ಅಧ್ಯಕ್ಷರುಗಳು ಸುದ್ದಿ ಜನಾಂದೋಲನದ ಫಲಕ ಸ್ವೀಕರಿಸಿ ಬೆಂಬಲ ವ್ಯಕ್ತಪಡಿಸಿದರು.