ನಾಗಪಟ್ಟಣ ಸದಾಶಿವ ದೇವಸ್ಥಾನದ ನಾಗನ ಕಟ್ಟೆಯಲ್ಲಿ ನಾಗರಪಂಚಮಿ ಆಚರಣೆ

0

ನಾಗಪಟ್ಟಣ ಶ್ರೀ ಸದಾಶಿವ ದೇವಸ್ಥಾನದ ನಾಗನ ಕಟ್ಟೆಯಲ್ಲಿ ನಾಗರಪಂಚಮಿ ಪ್ರಯುಕ್ತ ವಿಶೇಷ ಪೂಜೆಯು ಇಂದು ನಡೆಯಿತು.

ದೇವಸ್ಥಾನದ ಪ್ರಧಾನ ಅರ್ಚಕ ಶಿವಪ್ರಸಾದ್ ಕೆದಿಲಾಯ ರವರ ನೇತೃತ್ವದಲ್ಲಿ ನಾಗದೇವರಿಗೆ ಕ್ಷೀರಾಭಿ ಷೇಕ ಮತ್ತು ಸಿಯಾಳಾಭಿಷೇಕ ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಕೋಲ್ಚಾರು ಮತ್ತು ಸದಸ್ಯರು ಹಾಗೂ
ಭಜನಾ ಸಂಘದ ಸದಸ್ಯರು, ಭಕ್ತಾದಿಗಳು ಹಾಲು ಸೀಯಾಳ ತಂದು ನಾಗನಿಗೆ ಸಮರ್ಪಿಸಿದರು.