ಪಂಜ: ಗರಡಿ ಬೈಲು ಮೂಲ ನಾಗನಕಟ್ಟೆಯಲ್ಲಿ ನಾಗರ ಪಂಚಮಿ

0

ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲದ ನಾಗನ ಕಟ್ಟೆಗಳಲ್ಲಿ ಆ.9.ರಂದು ನಾಗರ ಪಂಚಮಿ ಜರುಗಿತು.

ಮುಂಜಾನೆ ದೇಗುಲದ ಸಮೀಪದ ನಾಗನ ಕಟ್ಟೆಯಲ್ಲಿ ಬಳಿಕ ಗರಡಿ ಬೈಲು ಮೂಲ ನಾಗನ ಕಟ್ಟೆಯಲ್ಲಿ ನಾಗರ ಪಂಚಮಿ ವಿವಿಧ ವೈಧಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಆ ಪ್ರಯುಕ್ತ ಹಣ್ಣುಕಾಯಿ, ಪಂಚಾಮೃತ ಅಭಿಷೇಕ,ನಾಗ ತಂಬಿಲ ಸೇವೆಗಳು ನಡೆಯಿತು . ಅರ್ಚಕ ರಾಮಚಂದ್ರ ಭಟ್ ವೈಧಿಕ ಕಾರ್ಯಕ್ರಮ ನೆರವೇರಿಸಿ ಪ್ರಾರ್ಥಿಸಿದರು.

ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ , ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸಂತೋಷ್ ರೈ ಪಲ್ಲತ್ತಡ್ಕ, ಧರ್ಮಪಾಲ ಗೌಡ ಮರಕಡ,ಧರ್ಮಣ್ಣ ನಾಯ್ಕ ಗರಡಿ, ರಾಮಚಂದ್ರ ಭಟ್, ಸತ್ಯನಾರಾಯಣ ಭಟ್ , ಮಾಯಿಲಪ್ಪ ಗೌಡ ಪಟ್ಟೆ ಎಣ್ಮೂರು ,ಕಾಯಂಬಾಡಿ,ಶ್ರೀಮತಿ ಮಾಲಿನಿ ಕುದ್ವ, ಶ್ರೀಮತಿ ಪವಿತ್ರ ಮಲ್ಲೆಟಿ , ಗೌರವ ಸಲಹೆಗಾರರು, ಸೀಮೆಯ ಭಕ್ತರು ಉಪಸ್ಥಿತರಿದ್ದರು.