ಗೂನಡ್ಕ: ಸಾರ್ವಜನಿಕರಿಗೆ ಹಾಗೂ ವಾಹನಗಳಿಗೆ ಕಲ್ಲು ತೂರಾಟ

0

ಮಾನಸಿಕ ಅಸ್ವಸ್ಥ ವ್ಯಕ್ತಿಯನ್ನು ಹಿಡಿದು ಠಾಣೆಗೆ ಕರೆದೊಯ್ದ ಪೊಲೀಸರು

ಮಾನಸಿಕ ಅಸ್ವಸ್ಥನಾದ ವ್ಯಕ್ತಿಯೋರ್ವ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಹಾಗೂ ವಾಹನಗಳಿಗೆ ಕಲ್ಲು ತೂರಾಟ ನಡೆಸುತ್ತಿದ್ದು, ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ ಮೇರೆಗೆ ಪೊಲೀಸರು ಆತನನ್ನು ಹಿಡಿದು ಪೊಲೀಸ್ ಠಾಣೆಗೆ ಕರೆದೊಯ್ದ ಘಟನೆ ದ.ಕ. ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ಆ.10ರಂದು ಅಪರಾಹ್ನ ಸಂಭವಿಸಿದೆ.

ಸುಳ್ಯದಿಂದ ಸಂಪಾಜೆ ಕಡೆಗೆ ರಸ್ತೆಯಲ್ಲಿ ನಡೆದುಕೊಂಡು ಬಂದ ವ್ಯಕ್ತಿಯೋರ್ವ ಅರಂತೋಡು ಮುಖ್ಯಪೇಟೆಯಲ್ಲಿ ಸಂಚರಿಸುತ್ತಿದ್ದ ವಾಹನಗಳಿಗೆ, ಸಾರ್ವಜನಿಕರಿಗೆ ಕಲ್ಲು ಎಸೆದಿದ್ದು, ಸ್ಥಳೀಯರು ಕಲ್ಲುಗುಂಡಿ ಹೊರಠಾಣಾ ಪೊಲೀಸರಿಗೆ ಮಾಹಿತಿ ನೀಡಿದರೆ‌ನ್ನಲಾಗಿದೆ.

ಪೊಲೀಸರು ಬಂದು ಗೂನಡ್ಕದ ಬಳಿ ಆತನನ್ನು ಹಿಡಿದು ಕಲ್ಲುಗುಂಡಿ ಹೊರ ಠಾಣೆಗೆ ಕರೆದೊಯ್ದಿರುವುದಾಗಿ ತಿಳಿದುಬಂದಿದೆ.