ಆ.14: ಸುಳ್ಯದಲ್ಲಿ ವಿ. ಹಿಂ.ಪ. ಭಜರಂಗದಳ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ

0

ಕಲ್ಕುಡ ದೈವದ ಸನ್ನಿಧಿಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಭಜರಂಗದಳ ಸುಳ್ಯ ಪ್ರಖಂಡ ವತಿಯಿಂದ ಆ.14ರಂದು ಸುಳ್ಯ ನಗರದಲ್ಲಿ ನಡೆಯುವ ಬೃಹತ್ ಪಂಜಿನ ಮೆರವಣಿಗೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಗಾಂಧಿನಗರದ ಕಲ್ಕುಡ ದೈವದ ಸನ್ನಿಧಿಯಲ್ಲಿ ಆ.11ರಂದು ಜರುಗಿತು.

ಈ ಸಂದರ್ಭ ವಿಶ್ವ ಹಿಂದೂ ಪರಿಷತ್ ಸುಳ್ಯ ಪ್ರಖಂಡದ ಅಧ್ಯಕ್ಷ ಸೋಮಶೇಖರ ಪೈಕ, ಕಾರ್ಯದರ್ಶಿ ನವೀನ್ ಸುಳ್ಳಿ, ಪುತ್ತೂರು ಜಿಲ್ಲಾ ಸಾಪ್ತಾಹಿಕ ಮಿಲನ್ ರೂಪೇಶ್ ಪೂಜಾರಿಮನೆ, ವಿಶ್ವ ಹಿಂದೂ ಪರಿಷತ್ ಸುಳ್ಯ ನಗರದ ಅಧ್ಯಕ್ಷ ಉಪೇಂದ್ರ ನಾಯಕ್, ನಗರ ಕಾರ್ಯದರ್ಶಿ ದೇವಿ ಪ್ರಸಾದ್ ಅತ್ಯಾಡಿ, ಸುಳ್ಯ ಮೊಸರು ಕುಡಿಕೆ ಉತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಯಾದವ್, ಸುಳ್ಯ ನಗರ ಭಜರಂಗದಳ ಸಂಯೋಜಕ್ ವರ್ಷಿತ್ ಚೊಕ್ಕಾಡಿ,ನಗರದ ಪ್ರಮುಖರು ಹಾಗೂ ನಗರದ
ಎಲ್ಲಾ ಕಾರ್ಯಕರ್ತರು ಉಪಸ್ಥಿತರಿದ್ದರು.