ಮಡಪ್ಪಾಡಿ: ಆತ್ಮಹತ್ಯೆಗೆ ಯತ್ನಿಸಿದ ವೃದ್ದ

0

ಮಂಗಳೂರು ಆಸ್ಪತ್ರೆಗೆ ದಾಖಲು

ಮಡಪ್ಪಾಡಿ: ಆತ್ಮಹತ್ಯೆಗೆ ಯತ್ನಿಸಿದ ವೃದ್ದ ಮಂಗಳೂರು ಆಸ್ಪತ್ರೆಗೆ ದಾಖಲು ವೃದ್ಧರೋರ್ವರು ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾದ ಘಟನೆ ಮಡಪ್ಪಾಡಿಯಿಂದ ವರದಿಯಾಗಿದೆ.

ಮಡಪ್ಪಾಡಿ ಗ್ರಾಮದ ವಾಲ್ತಾಜೆಯ 72 ವರ್ಷದ ಬಾಲಕೃಷ್ಣ ಗೌಡ ಎಂಬವರು ಆತ್ಮಹತ್ಯೆಗೆ ಯತ್ನಿಸಿದವರು. ಬಾಲಕೃಷ್ಣರವರು ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು , ಮನೆಯವರು ಕೂಡಲೇ ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ತಂದಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ..
ಆತ್ಮಹತ್ಯೆಗೆ ಯತ್ನಿಸಿದಕ್ಕೆ ನಿಖರವಾದ ಮಾಹಿತಿ ತಿಳಿದುಬಂದಿಲ್ಲ.