ಸೋಣಗೇರಿ : ಶ್ರೀಕೃಷ್ಣ ಭಜನಾ ಮಂದಿರ ಶ್ರದ್ದಾ ಕೇಂದ್ರ ಸ್ವಚ್ಛತಾ ಕಾರ್ಯ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸುಳ್ಯ ತಾಲೂಕು ಜಾಲ್ಸೂರು ವಲಯದ ಸೋಣಂಗೇರಿ ಒಕ್ಕೂಟದ ಸಹಾಭಾಗೀತ್ವದಲ್ಲಿ ಸೋಣಂಗೇರಿ ಶ್ರೀಕೃಷ್ಣ ಭಜನಾ ಮಂದಿರದ ವಠಾರದ ಶ್ರದ್ದಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು.ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಭಜನಾ ಮಂದಿರದ ಅಧ್ಯಕ್ಷ ಗಿರಿಧರ ನಾಯರ್ ಹಿತ್ಲು, ಜಾಲ್ಸೂರು ವಲಯದ ಭಜನಾ ಪರಿಷತ್ ನಿರ್ದೇಶಕ ಪುರುಷೋತ್ತಮ ಆಚಾರ್ಯ, ಜಾಲ್ಸುರು ವಲಯದ ಮೇಲ್ವಿಚಾರಕ ತೀರ್ಥರಾಮ, ಸೋಣಂಗೇರಿ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಶ್ರೀಮತಿ ಸೌಮ್ಯ, ಒಕ್ಕೂಟದ ಪದಾಧಿಕಾರಿಗಳು ಸದಸ್ಯರು ಭಾಗವಹಿಸಿ ಶ್ರಮದಾನ ನಡೆಸಿದರು.