ಕನಕಮಜಲು ಪ್ರಾ.ಕೃ.ಪ.ಸ.ಸಂಘಕ್ಕೆ ಶೇ. 100 ಸಾಲ ವಸೂಲಾತಿಗಾಗಿ ಪ್ರಶಸ್ತಿ

0

ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಜಾಲ್ಸೂರು ಸಂಘವು 2023-24ನೇ ಸಾಲಿನಲ್ಲಿ ಮಾಡಿದ ಶೇ. ನೂರು ಸಾಲ ವಸೂಲಾತಿಗಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಪ್ರಶಸ್ತಿ ಲಭಿಸಿದೆ.

ಸಹಕಾರಿ ಸಂಘದ ಅಧ್ಯಕ್ಷ ನಾರಾಯಣ ಗೌಡ ಬೊಮ್ಮೆಟ್ಟಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಹಿತ್ ಕುಮಾರ್ ಕುದ್ಕುಳಿ ಅವರು ಮಂಗಳೂರಿನಲ್ಲಿ ಆ.14ರಂದು ನಡೆದ ದ.ಕ. ಜಿಲ್ಲಾ ಸಹಕಾರಿ ಸಂಘದ ಮಹಾಸಭೆಯಲ್ಲಿ ಪ್ರಶಸ್ತಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಸಹಕಾರಿ ಸಂಘದ ಉಪಾಧ್ಯಕ್ಷ ಕರುಣಾಕರ ರೈ ಕುಕ್ಕಂದೂರು, ನಿರ್ದೇಶಕರುಗಳಾದ ಗಣೇಶ ಅಂಬಾಡಿಮೂಲೆ, ಡಾ. ಗೋಪಾಲಕೃಷ್ಣ ಭಟ್ ಕಾಟೂರು, ಶ್ರೀಕೃಷ್ಣ ಭಟ್ ನೆಡಿಲು, ಸುಖೇಶ್ ಅಡ್ಕಾರು, ಪ್ರೇಮಲತಾ ಪಲ್ಲತ್ತಡ್ಕ, ಶ್ರೀಮತಿ ಸಾವಿತ್ರಿ ಕಾರಿಂಜ, ಶ್ರೀಮತಿ ಭಾರತಿ ಪಿ.ಕೆ. ಕಜೆಗದ್ದೆ ಉಪಸ್ಥಿತರಿದ್ದರು.