ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

0

ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಆ.15 ರಂದು ನಡೆಯಿತು.

ಸಂಘದ ಅಧ್ಯಕ್ಷ ಗಣೇಶ್ ಪೈ ಧ್ವಜಾರೋಹಣ ಗೈದು ಮಾತನಾಡಿದರು. ನಿರ್ದೇಶಕರಾದ ಚಂದ್ರಶೇಖರ ಶಾಸ್ತ್ರಿ, ಸುಬ್ರಹ್ಮಣ್ಯ ಕುಳ ಮಾತನಾಡಿದರು .

ಸಂಘದ ಉಪಾಧ್ಯಕ್ಷ ಕೆ ರಘುನಾಥ ರೈ, ನಿರ್ದೇಶಕರಾದ ಲಿಗೋಧರ ಆಚಾರ್ಯ, ಶ್ರೀ ಕೃಷ್ಣ ಭಟ್ ಪಟೋಳಿ, ವಾಚಣ್ಣ ಕೆರೆಮೂಲೆ, ಚಿನ್ನಪ್ಪಗೌಡ ಚೊಟ್ಟೆಮಜಲು, ಕಿಟ್ಟಣ್ಣ ಪೂಜಾರಿ, ಮುದರ ಐವತೊಕ್ಲು, ಶ್ರೀಮತಿ ಮೋಹಿನಿ ಬೊಳ್ಮಲೆ, ಶ್ರೀಮತಿ ಹೇಮಲತಾ ಚಿದ್ಗಲ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೇಮಿರಾಜ ಪಲ್ಲೋಡಿ ಮತ್ತು ಸಿಬ್ಬಂದಿಗಳು, ಊರವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ನೇಮಿರಾಜ ಪಲ್ಲೋಡಿ ಸ್ವಾಗತಿಸಿದರು. ಲೋಹಿತ್ ಎಣ್ಣೆಮಜಲು ಧ್ವಜಾರೋಹಣ ಕಾರ್ಯಕ್ರಮ ನಿರೂಪಿಸಿದರು. ಚಂದ್ರಶೇಖರ ಇಟ್ಯಡ್ಕ ನಿರೂಪಿಸಿದರು. ಸುದೀಪ್ ರೈ ವಂದಿಸಿದರು.