ಸುಳ್ಯಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

0

ಸುಳ್ಯಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆ.15ರಂದು ಆಚರಿಸಲಾಯಿತು.

ವ್ಯವಸ್ಥಾಪನಾ ಸಮಿತಿ ನಿಕಟ ಪೂರ್ವ ಅಧ್ಯಕ್ಷ ಕಿಶೋರ್ ಕುಮಾರ್ ಉಳುವಾರು ಧ್ವಜಾರೋಹಣ ನೆರವೇರಿಸಿ, ಶುಭಹಾರೈಸಿದರು.

ರಾಜೇಶ್ ರೈ ಮೇನಾಲ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ತೊಡಿಕಾನ ಶಾಲಾ ಮಕ್ಕಳು ರಾಷ್ಟ್ರಗೀತೆ ಹಾಡಿದರು. ಮಾಜಿ ತಾ.ಪಂ‌ ಉಪಾಧ್ಯಕ್ಷೆ ಶ್ರೀಮತಿ ಪುಷ್ಪಾ ಮೇದಪ್ಪ ಅವರು ವಂದೇ ಮಾತರಂ ಹಾಡಿದರು. ಉಮಾಶಂಕರ್ ಅಡ್ಯಡ್ಕ ಕಾರ್ಯಕ್ರಮ ನಿರೂಪಿಸಿದರು. ಊರವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು