ಕೊಯಿಕುಳಿ ಹಿ‌.ಪ್ರಾ.ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0


ದುಗ್ಗಲಡ್ಕ ಕೊಯಿಕುಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78 ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಗಂಗಾಧರ ನೀರಬಿದಿರೆ ಧ್ವಜಾರೋಹಣ ನೆರವೇರಿಸಿದರು.


ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಶಾಲಾ ಶತಮಾನೋತ್ಸವ ಸಮಿತಿಯ ಸಂಚಾಲಕ ಕೆ.ಟಿ.ವಿಶ್ವನಾಥ, ದುಗ್ಗಲಡ್ಕ ಕುರಲ್ ತುಳುಕೂಟದ ಅಧ್ಯಕ್ಷ ರಮೇಶ್ ನೀರಬಿದಿರೆ ಅತಿಥಿಗಳಾಗಿ ಮಾತನಾಡಿದರು. ವೇದಿಕೆಯಲ್ಲಿ ಎಸ್.ಡಿ.ಎಂ.ಸಿ.ಅಧ್ಯಕ್ಷ ಗಂಗಾಧರ ನೀರಬಿದಿರೆ, ಮಿತ್ರ ಯುವಕ ಮಂಡಲದ ಅಧ್ಯಕ್ಷ ತೀರ್ಥರಾಮ ಕೊಯಿಕುಳಿ, ಕುರಲ್ ತುಳುಕೂಟದ ಕಾರ್ಯದರ್ಶಿ ಕೆ.ಟಿ.ಭಾಗೀಶ್ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಶಿಕ್ಷಕಿ ಶ್ರೀಮತಿ ಪಲ್ಲವಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಪ್ರಭಾಕರ ವಂದಿಸಿದರು. ಶಿಕ್ಷಕರು, ಎಸ್.ಡಿ.ಎಂ.ಸಿ.ಸದಸ್ಯರು, ಊರವರು, ಪೋಷಕರು ಭಾಗವಹಿಸಿದ್ದರು.


ಶಾಲಾ ಮಕ್ಕಳು ದೇಶ ಭಕ್ತಿ ಗೀತೆ ಹಾಡಿದರು. ಸ್ವಾತಂತ್ರ್ಯ ದಿನಾಚರಣೆ ಕುರಿತು ಮಾತನಾಡಿದರು.
ಮಕ್ಕಳಿಗೆ ಕೊಯಿಕುಳಿ ಶ್ರೀ ಕೃಷ್ಣ ಭಜನಾ ಮಂದಿರದ ವತಿಯಿಂದ ಮತ್ತು ಪೋಷಕರಾದ ಇಬ್ರಾಹಿಂ ನೀರಬಿದಿರೆ, ಪರಮೇಶ್ವರ ನೀರಬಿದಿರೆ ಸಿಹಿತಿಂಡಿ ನೀಡಿದರು.