ಅಡ್ತಲೆ : ಅರ್ಜಿಕಜೆ ಅಂಬೇಡ್ಕರ್ ರಕ್ಷಣಾ ವೇದಿಕೆ ಆರಂತೋಡು ಘಟಕದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

0

ಅಂಬೇಡ್ಕರ್ ರಕ್ಷಣಾ ವೇದಿಕೆ ಆಶ್ರಯದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಊರಿನ ಹಿರಿಯರಾದ ನಾರಾಯಣ ಪಾಟಲಿ ಕೊಟ್ರಡ್ಕ ಇವರು ನೆರವೇರಿಸಿ ಶುಭಕೋರಿದರು. ಅಂಬೇಡ್ಕರ್ ರಕ್ಷಣಾ ವೇದಿಕೆ ಆರಂತೋಡು ಗ್ರಾಮ ಘಟಕದ ಅಧ್ಯಕ್ಷರಾದ ನವೀನ ಕಲ್ಲುಗುಡ್ಡೆ ಸ್ವಾತಂತ್ರ್ಯ ದಿನಾಚರಣೆಯ ಕುರಿತು ಪ್ರಾಸ್ತವಿಕ ಮಾತುಗಳನ್ನಾಡಿದರು. ಈ ಸಂದರ್ಭದಲ್ಲಿ ಘಟಕದ ಕಾರ್ಯದರ್ಶಿ ಸುಳ್ಯ ತಾಲೂಕು ಕಾರ್ಯದರ್ಶಿ ಮತ್ತು ಸಂಘಟನೆಯ ಎಲ್ಲಾ ಸದಸ್ಯರು ಊರಿನ ಹಿರಿಯ ಕಿರಿಯ ನಾಗರಿಕರು ಹಾಜರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಕಿಟ್ಟು ಅರಮನೆಗಯಾ ನೆರವೇರಿಸಿದರು. ರಾಷ್ಟ್ರಗೀತೆಯನ್ನು ನಿಶ್ಮಿತಾ, ರೂಪ, ಚೈತ್ರ, ಪವಿತ್ರ, ಇವರು ನೆರವೇರಿಸಿದರು. ಧನ್ಯವಾದ ಕಾರ್ಯಕ್ರಮವನ್ನು ಚಂದ್ರಶೇಖರ ಕುಂಪುಲಿ ನೆರವೇರಿಸಿದರು.