ಪಾಂಡಿಗದ್ದೆ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಮತ್ತು ದತ್ತಿ ನಿಧಿ ವಿತರಣೆ

0


ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪಾಂಡಿಗದ್ದೆಯಲ್ಲಿ ಸಂಭ್ರಮದಿಂದ 78ನೆಯ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.

ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ವಾಚಣ್ಣ ಕೆರೆಮೂಲೆ ಧ್ವಜಾರೋಹಣಗೈದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ದಾನಿಗಳ ಮೂಲಕ ಕೊಡ ಮಾಡಿದ ದತ್ತಿನಿಧಿಗಳನ್ನು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಸಭಾ ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯರಾದ ಲಕ್ಷ್ಮಣಗೌಡ ಬೊಳ್ಳಾಜೆ, ನಿವೃತ್ತ ಶಿಕ್ಷಕರಾದ ದುರ್ಗಪ್ಪ ಗೌಡ ದೊಡ್ಡಮನೆ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ಶಾಲಾ ಮುಖ್ಯಗುರುಗಳಾದ ಯಶೋಧರ ಕೆ ಸ್ವಾಗತಿಸಿದರು. ಅತಿಥಿ ಶಿಕ್ಷಕಿಯಾದ ವಿಂದ್ಯಾ ಕೆ. ದತ್ತಿನಿಧಿ ವಿದ್ಯಾರ್ಥಿಗಳ ಪಟ್ಟಿಯನ್ನು ವಾಚಿದರು. ಅತಿಥಿ ಶಿಕ್ಷಕಿ ಶಶಿಕಲಾ ವಂದರಾರ್ಪಣೆಗೈದರು. ಸಹ ಶಿಕ್ಷಕರಾದ ಅಶೋಕ್ ಕುಮಾರ್ ಕಾರ್ಯಕ್ರಮ ನಿರ್ವಹಣೆ ಮಾಡಿದರು. ಕಾರ್ಯಕ್ರಮದಲ್ಲಿ ಶಾಲೆಯ ಹಳೆ ವಿದ್ಯಾರ್ಥಿಗಳು ಊರಿನ ವಿದ್ಯಾಭಿಮಾನಿಗಳು, ಮಕ್ಕಳ ಪೋಷಕರು ಮತ್ತು ಶಾಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಜರಿದ್ದರು.