ಸೈಂಟ್ ಜೋಸೆಫ್ ವಿದ್ಯಾಸಂಸ್ಥೆ ಸ್ವಾತಂತ್ರೋತ್ಸವ ಸಂಭ್ರಮ ಹಾಗೂ ರಜತ ಮಹೋತ್ಸವ ವರ್ಷಾಚರಣೆಯ ಉದ್ಘಾಟನೆ

0

ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯೊತ್ಸವ ಕಾರ್ಯಕ್ರಮ ಹಾಗೂ ರಜತ ಮಹೋತ್ಸವ ವರ್ಷಾಚರಣೆ ಕಾರ್ಯಕ್ರಮ ಉದ್ಘಾಟನ ಸಮಾರಂಭ ಆ.15 ರಂದು ವಿದ್ಯಾಸಂಸ್ಥೆಯ ವಠಾರದಲ್ಲಿ ನಡೆಯಿತು.

ಬೆಳಿಗ್ಗೆ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ಪಥಸಂಚಲನ‌ ಮತ್ತು ಧ್ವಜಾರೋಹಣ ಕಾರ್ಯಕ್ರಮ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು.


ಧ್ವಜಾರೋಹಣ ವನ್ನು ಶಾಲಾಸಂಚಾಲಕರಾದ ರೆ.ಪಾ ವಿಕ್ಟರ್ ಡಿಸೋಜ ನೆರವೇರಿಸಿದರು.

ರಜತ ಮಹೋತ್ಸವ ವರ್ಷಾಚರಣೆ ಕಾರ್ಯಕ್ರಮಕ್ಕೆ ಮಂಗಳೂರು ಕೆಥೊಲಿಕ್ ಎಜುಕೇಶನ್ ಬೋರ್ಡ್ ಇದರ ಕಾರ್ಯದರ್ಶಿ ರೆ.ಡಾ.ಪ್ರವೀಣ್ ಲೀಯೊ ಲಸ್ರಾದೊ ರವರು ಉದ್ಘಾಟಿಸಿ ಚಾಲನೆ ನೀಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ ಯೋದ ಹೇಮನಾಥ್ ಬಿ ಕೊಡಿಯಾಲಬೈಲ್ ಮುಖ್ಯ ಅತಿಥಿಗಳಾಗಿ ಶುಭ ಹಾರೈಸಿದರು.


ವೇದಿಕೆಯಲ್ಲಿ ನಗರ ಪಂಚಾಯತ್ ಸದಸ್ಯರಾದ ಡೇವಿಡ್ ದೀರಾ ಕ್ರಾಸ್ತ,ಚರ್ಚ್ ಪಾಲನ ಸಮಿತಿ ಉಪಾಧ್ಯಕ್ಷ ನವೀನ್ ಮಚಾದೊ,ಪಾಲನ ಸಮಿತಿ ಕಾರ್ಯದರ್ಶಿ ಜೂಲಿಯಾನ ಕ್ರಾಸ್ತ,ಸೈಂಟ್ ಜೊಸೆಫ್ ಪೋಷಕ ಸಮಿತಿ ಉಪಾಧ್ಯಕ್ಷ ಹೇಮನಾಥ್ ಬಿ,ಶಶಿಧರ ಎಂ ಜೆ,ಪ್ರಬೋದ್ ಶೆಟ್ಟಿ,ಹಿರಿಯ ವಿದ್ಯಾರ್ಥಿ ಸಂಘದ ರಾಹುಲ್ ಜಿ ದಾಸ್,ಆದರ್ಶ ಎಸ್ ಪಿ,ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು
ಮುಖ್ಯ ಶಿಕ್ಷಕಿ ಸಿಸ್ಟರ್ ಸ್ಟೇಲ್ಲಾ ಸ್ವಾಗತಿಸಿದರು.