ಬೂಡು ಅಂಗನವಾಡಿಯಲ್ಲಿ ಶ್ರೀ ಭಗವತಿ ಯುವ ಸೇವಾ ಸಂಘದ ವತಿಯಿಂದ ಸ್ವಾತಂತ್ರೊತ್ಸವ ಅಚರಣೆ

0

ಸಂಭ್ರಮದ 78ನೇ ವರ್ಷದ ಸ್ವಾತಂತ್ರೊತ್ಸವವನ್ನು ಶ್ರೀ ಭಗವತಿ ಯುವ ಸೇವಾ ಸಂಘದ ವತಿಯಿಂದ ಬೂಡು ಅಂಗನವಾಡಿಯಲ್ಲಿ ಆ.15 ರಂದು ಆಚರಿಸಲಾಯಿತು. ಸಂಘದ ನಿಕಟಪೂರ್ವಾಧ್ಯಕ್ಷರಾದ ಗೋಪಾಲ ಎಸ್. ನಡುಬೈಲು ಧ್ವಜಾರೋಹಣವನ್ನು ನೆರವೇರಿಸಿದರು. ಸಂಘದ ಅಧ್ಯಕ್ಷರಾದ ಸುನಿಲ್ ಕುಮಾರ್ ಕೇರ್ಪಳರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಸೋನಿಯಾ, ಶ್ರೀ ಭಗವತಿ ಯುವ ಸೇವಾ ಸಂಘದ ಗೌರವಾಧ್ಯಕ್ಷರಾದ ಬೂಡು ರಾಧಾಕೃಷ್ಣ ರೈ ಮತ್ತು ಮಾಜಿ ಅಧ್ಯಕ್ಷರಾದ ವಿಠಲ ರೈ ಬೂಡು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಕವಿತಾ ಸ್ವಾಗತಿಸಿದರು. ಬೂಡು ಕುಸುಮಾಧರ ರೈ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶ್ರೀ ಭಗವತಿ ಯುವ ಸೇವಾ ಸಂಘದ ಪದಾಧಿಕಾರಿಗಳು, ಸದಸ್ಯರು ಬಾಲವಿಕಾಸ ಸಮಿತಿ ಪದಾಧಿಕಾರಿಗಳು, ಸದಸ್ಯರು ಮತ್ತು ಊರವರು ಉಪಸ್ಥಿತರಿದ್ದರು.