ಸುಬ್ರಹ್ಮಣ್ಯ :ಹೊಸಬೆಳಕು ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿಶೇಷ ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ

0

78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹೊಸಬೆಳಕು ಚಾರಿಟೇಬಲ್ ಟ್ರಸ್ಟ್ ಸುಬ್ರಹ್ಮಣ್ಯ ಇದರ ವತಿಯಿಂದ ಬೆಥನಿ ಜೀವನ ಜ್ಯೋತಿ ವಿಶೇಷ ಶಾಲ ವಿದ್ಯಾರ್ಥಿಗಳಿಗೆ ಆ.15 ರಂದು ವಿದ್ಯಾರ್ಥಿ ವೇತನವನ್ನು ನೀಡಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಸಾಮಾಜಿಕ ಧುರೀಣ ಎ.ಪಿ ಚೆರಿಯನ್ ಮರ್ದಾಳ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾಜಿ ಸೈನ್ಯಾಧಿಕಾರಿ ವಿಲಿಯಂ ಅಯಿಪು,ಸೌಹಾರ್ದ ಸಂಘ ಮರ್ದಾಳ ಅಧ್ಯಕ್ಷ ಅಬ್ದುಲ್ ರಹಿಮಾನ್ ಉಪಸ್ಥಿತರಿದ್ದರು.

ಹೊಸ ಬೆಳಕು ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷ ಡಾl ತಿಲಕ್ ಎ.ಎ, ಟ್ರಸ್ಟ್ ನ ನಿರ್ದೇಶಕಿ ಶ್ರೀಮತಿ ಗಾಯತ್ರಿ ಕೆ , ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಮಧು ಯತೀಶ್ ವೇದಿಕೆಯಲ್ಲಿದ್ದರು. ಕಾರ್ಯಕ್ರಮದ ಸಂಯೋಜಕರಾದ ಶಯನ ಕುಮಾರಿ ನಿರ್ವಹಿಸಿದರು. ಸಂಸ್ಥೆಯ ಮುಖ್ಯಸ್ಥೆ ಶೈಲಜ ವಂದನಾರ್ಪಣೆ ಸಲ್ಲಿಸಿದರು.