ಆಲೆಟ್ಟಿ ಸದಾಶಿವ ದೇವಳದ ಶ್ರೀ ಕೃಷ್ಣ ಜನ್ಮಾಷ್ಠಮಿ ಆಮಂತ್ರಣ ಪತ್ರ ಬಿಡುಗಡೆ

0

ಆಲೆಟ್ಟಿ ಸದಾಶಿವ ದೇವಸ್ಥಾನದಲ್ಲಿ ಸೆ.26 ರಂದು ನಡೆಯಲಿರುವ ಶ್ರೀ ಕೃಷ್ಣ ಜನ್ಮಾಷ್ಠಮಿಯ ಆಮಂತ್ರಣ ಪತ್ರ ಬಿಡುಗಡೆಯು ದೇವಳದಲ್ಲಿ ಆ.16 ರಂದು ನಡೆಯಿತು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ತೀರ್ಥಕುಮಾರ್ ಕುಂಚಡ್ಕ ಆಮಂತ್ರಣ ಪತ್ರ ಬಿಡುಗಡೆ ಗೊಳಿಸಿದರು. ಮಾಜಿ ಅಧ್ಯಕ್ಷ ಪ್ರಸನ್ನ ಕೆ‌ಸಿ.ಬಡ್ಡಡ್ಕ, ಸದಸ್ಯರಾದ ಅಚ್ಚುತ ಮಣಿಯಾಣಿ ಆಲೆಟ್ಟಿ, ಸೇ.ಸ.ಕಾರ್ಯದರ್ಶಿ ರಾಮಚಂದ್ರ ಆಲೆಟ್ಟಿ, ಭಜನಾ ಸಂಘದ ಅಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ, ಕೋಶಾಧಿಕಾರಿ ಸುಂದರ ಆಲೆಟ್ಟಿ,
ನವೀನ್ ಕುಮಾರ್ ಆಲೆಟ್ಟಿ, ಪುರುಷೋತ್ತಮ ದೋಣಿಮೂಲೆ, ಮಹೇಶ್ ಕುತ್ಯಾಳ,ನಾರಾಯಣ ಬಾರ್ಪಣೆ ಮತ್ತಿತರರು ಉಪಸ್ಥಿತರಿದ್ದರು.