ಕಬಡ್ಡಿಯಲ್ಲಿ ಜ್ಞಾನದೀಪ ಶಾಲೆಯ ತೃಷಾ. ಕೆ. ಎಚ್. ರಾಜ್ಯಮಟ್ಟಕ್ಕೆ

0

ವಿದ್ಯಾಭಾರತಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆ ಇದರ ಆಶ್ರಯದಲ್ಲಿ ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕದಲ್ಲಿ ನಡೆದ ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಜ್ಞಾನದೀಪ ವಿದ್ಯಾ ಸಂಸ್ಥೆ ಎಲಿಮೆಲೆ ವಿದ್ಯಾರ್ಥಿನಿ ತೃಷಾ. ಕೆ. ಎಚ್. ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾಳೆ. ಇವಳು ಹಾಸನದಲ್ಲಿ ನಡೆಯಲಿರುವ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ.

ಈಕೆ ಮರ್ಕಂಜ ಮತ್ತು ನೆಲ್ಲೂರು ಕೆಮ್ರಾಜೆ ಗ್ರಾಮದ ಮಿನಿoಗೂರು ಹಾಗೂ ರೆಂಜಾಳ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ, ರಾಜಕೀಯ ಧುರೀಣ ಹರೀಶ್ ಕಂಜಿಪಿಲಿ ಮತ್ತು ಶ್ರೀಮತಿ ಶ್ವೇತ ದಂಪತಿಗಳ ಪುತ್ರಿ.