ಕೆ.ವಿ.ಜಿ. ಅಮರಜ್ಯೋತಿ ಪಿ.ಯು. ಕಾಲೇಜಿನಲ್ಲಿ ಎ.ಜೆ. ಸ್ಕಾಲರ್ಶಿಪ್ ಲಿಂಕ್‌ ಬಿಡುಗಡೆ, 10ನೇ ತರಗತಿ ವಿದ್ಯಾರ್ಥಿಗಳಿಗೆ ಅವಕಾಶ

0

ಕೆವಿಜಿ ಅಮರಜ್ಯೋತಿಯಲ್ಲಿ ಕೆವಿಜಿ ಎಜೆ ಸ್ಕಾಲರ್ಷಿಪ್ ಪರೀಕ್ಷೆಗೆ ಜಾಯಿನ್ ಆಗವ ನೂತನ ಲಿಂಕನ್ನು ಖ್ಯಾತ ಮಾಜಿ ಅಂತಾರಾಷ್ಟ್ರೀಯ ರಗ್ಬಿ ಆಟಗಾರ ಹಾಗೂ ಪ್ರಗತಿ ಸಂಸ್ಥೆಯ ಪ್ರೊಪ್ರೈಟರ್ ಮಾದಂಡ ತಿಮ್ಮಯ್ಯ ಹಾಗೂ ಕಾಲೇಜಿನ ಸಿಇಒ ಡಾ. ಉಜ್ವಲ್ ಯು ಜೆ. ಉದ್ಘಾಟಿಸಿದರು.

ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಸ್ಕಾಲರ್ಷಿಪ್ ಪರೀಕ್ಷೆಯನ್ನು ಮುಂದಿನ ಅ. 27ರಂದು ನಡೆಸಲಾಗುವುದು. ಆಸಕ್ತ ವಿದ್ಯಾರ್ಥಿಗಳು ನೂತನ ಲಿಂಕ್ ಮೂಲಕ ಅಥವಾ QR ಕೋಡ್ ಸ್ಕ್ಯಾನ್ ಮಾಡಿ ಸ್ಕಾಲರ್ಷಿಪ್ ಪರೀಕ್ಷೆಯಲ್ಲಿ ಭಾಗವಹಿಸಬಹುದಾಗಿದೆ. ಪರೀಕ್ಷೆಯಲ್ಲಿ ಉತ್ತೀರ್ಣರಾದ ಅರ್ಹ ವಿದ್ಯಾರ್ಥಿಗಳಿಗೆ ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ತಲಾ 5ವಿದ್ಯಾರ್ಥಿಗಳಂತೆ ಒಟ್ಟು 10ವಿದ್ಯಾರ್ಥಿಗಳಿಗೆ ಭೋದನಾ ಶುಲ್ಕದಲ್ಲಿ ಒಟ್ಟು ರೂ. 15 ಲಕ್ಷಕ್ಕೂ ಮೇಲ್ಪಟ್ಟ ಶುಲ್ಕ ವಿನಾಯಿತಿ ಇರುತ್ತದೆ. ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಭೋದನಾ ಶುಲ್ಕದಲ್ಲಿ ಶೇ. 100 ರಷ್ಟು ರಿಯಾಯಿತಿ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಭೋದನಾ ಶುಲ್ಕದಲ್ಲಿ ಶೇ.75%ರಷ್ಟು ರಿಯಾಯಿತಿ, ನಾಲ್ಕನೇ ಮತ್ತು ಐದನೇ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಭೋದನಾ ಶುಲ್ಕದಲ್ಲಿ ಶೇ. 50ರಷ್ಟು ರಿಯಾಯಿತಿಯನ್ನು ಪಡೆಯಬಹುದೆಂದು ಕಾಲೇಜಿನ ಸಿಇಒ ಡಾ. ಉಜ್ವಲ್ ಯು.ಜೆಯವರು ಘೋಷಿಸಿದರು. ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ಡಾ. ರೇಣುಕಾ ಪ್ರಸಾದ್ ಕೆ ವಿ,ಟ್ರಸ್ಟಿ ಡಾ. ಜ್ಯೋತಿ ಆರ್ ಪ್ರಸಾದ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ ಕಾಲೇಜಿನ ಉಪ ಪ್ರಾಂಶುಪಾಲರಾದ ದೀಪಕ್ ವೈ.ಆರ್ ಹಾಗೂ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.